ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ.ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ ೨೫ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಎರಡು ಪ್ರಶಸ್ತಿಯೊಂದಿಗೆ ಆರಂಭವಾದ ಈ ಸಮಾರಂಭಕ್ಕೆ ಆಗಮಿಸಿದ ಗಣ್ಯರು ನಮ್ಮ ಸಂಸ್ಥೆಯ ಮೂಲಕ ಪ್ರಶಸ್ತಿ ನೀಡಲು ಮುಂದಾದರು. ಈಗ ಪ್ರಶಸ್ತಿಗಳ ಸಂಖ್ಯೆ ೧೧ಕ್ಕೇರಿದೆ. ಇಂದು ನಮ್ಮೊಂದಿಗೆ ಪ್ರಸಿದ್ದ ನಟರು, ಪತ್ರಕರ್ತರು ಹಾಗೂ ನಿರ್ದೇಶಕರು ಪ್ರಶಸ್ತಿ ಸಮಾರಂಭಕ್ಕೆ ಜೊತೆಯಾಗಿ ಈ ಸಂಸ್ಥೆಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಸಂಸ್ಥೆಯ ೩೭ನೇ ವಾರ್ಷಿಕೋತ್ಸವ ಹಾಗೂ ೧೩ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಮೇ ೩೧ರ ಶನಿವಾರದಂದು ಸಂಜೆ ೫ಕ್ಕೆ ನಗರದ ಶ್ರೀಚಾಮುಂಡೇಶ್ವರಿ ಸ್ಟುಡಿಯೋ (ಕನ್ನಿಂಗ್ ಹ್ಯಾಮ್ ರಸ್ತೆ, ವೊಕಾರ್ಟ್ ಆಸ್ಪತ್ರೆ ಬಳಿ)ನಲ್ಲಿ ನಡೆಯಲಿದೆ.
ಪ್ರಶಸ್ತಿಗಳ ವಿವರ
ಶ್ರೀ ಸಿ.ಜಯರಾಂ ಹಿರಿಯ ಚಲನಚಿತ್ರ ನಿರ್ಮಾಪಕರು
(ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಶ್ರೀ ಸುಬ್ರಹ್ಮಣ್ಯ(ಮೈಸೂರು) ಹಿರಿಯ ಚಲನಚಿತ್ರ ಪತ್ರಕರ್ತರು
(ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಶ್ರೀಮತಿ ಸಂಗೀತಾ ಕಟ್ಟಿ ಖ್ಯಾತ ಹಿನ್ನಲೆಗಾಯಕರು
(‘ಡಾ:ರಾಜ್ಕುಮಾರ್ ಪ್ರಶಸ್ತಿ ಶ್ರೀಮತಿ ಪಾರ್ವತಮ್ಮ ರಾಜ್ಕುಮಾರ್ ಅವರಿಂದ)
ಶ್ರೀದಿನೇಶ್ಬಾಬು ನಿರ್ದೇಶಕರು
(‘ಯಜಮಾನ ಚಿತ್ರದ ಖ್ಯಾತಿ ‘ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ)
ಶ್ರೀಮತಿ ಗಿರಿಜಾಲೋಕೇಶ್ ಕಲಾವಿದರು
(ಖ್ಯಾತ ಅಭಿನೇತ್ರಿ ಶ್ರೀಮತಿ ಜಯಮಾಲ ಎಚ್.ಎಂ.ರಾಮಚಂದ್ರ ಪ್ರಶಸ್ತಿ)
ಶ್ರೀ ಪೂರ್ಣಚಂದ್ರ ತೇಜಸ್ವಿ ಅತ್ಯತ್ತಮ ಸಂಗೀತ ನಿರ್ದೇಶನ ‘ಲೂಸಿಯಾಚಿತ್ರಕ್ಕಾಗಿ
(ಎಂ.ಎಸ್.ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ.ಲಿ ಪ್ರಶಸ್ತಿ)
ಶ್ರೀ ಪವನ್ಕುಮಾರ್ ಅತ್ಯುತ್ತಮ ಕಥಾಲೇಖಕರು ‘ಲೂಸಿಯಾ ಚಿತ್ರ
(‘ಖ್ಯಾತ ನಿರ್ದೇಶಕ, ನಿರ್ಮಾಪಕ ಶ್ರೀಕೆ.ವಿ.ಜಯರಾಂ ಪ್ರಶಸ್ತಿ ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ)
ಶ್ರೀ ಗಡ್ಡ ವಿಜಿ ಅತ್ಯುತ್ತಮ ಸಂಭಾಷಣೆ ‘ದ್ಯಾವ್ರೆ ಚಿತ್ರಕ್ಕಾಗಿ
(‘ಖ್ಯಾತ ಚಿತ್ರ ಸಾಹಿತಿ ಶ್ರೀಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಡಾ:ಎಚ್.ಕೆ.ನರಹರಿ ಅವರಿಂದ)
ಶ್ರೀ ಸಂತೋಷ್ ‘ಗೊಂಬೆಗಳ ಲವ್ ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ
(ರಂಗ ತಜ಼್ಞ, ಹಿರಿತೆರೆ - ಕಿರುತೆರೆ ನಿರ್ದೇಶಕ ಶ್ರೀಬಿ.ಸುರೇಶ್ ಪ್ರಶಸ್ತಿ)
ಶ್ರೀಗಿರಿರಾಜ್ ‘ಜಟ್ಟಚಿತ್ರದ (ಕುರುಡ ಬಾವಲಿ ರಾತ್ರಿ ಹೊತ್ತಲಿ) ಗೀತರಚನೆಗಾಗಿ
(‘ಹಿರಿಯ ಪತ್ರಕರ್ತರಾದ ಶ್ರೀಪಿ.ಜಿ.ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಪತ್ರಕರ್ತ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ )
ಶ್ರೀ ಹೊನ್ನವಳ್ಳಿ ಕೃಷ್ಣ ಹಿರಿಯ ಕಲಾವಿದರು
(‘ಕಿಚ್ಚ ಕ್ರಿಯೇಷನ್ಸ್ ಪ್ರಶಸ್ತಿ ನಟ ಶ್ರೀ ಸುದೀಪ್ ಅವರಿಂದ)