‘24ಕ್ಯಾರೆಟ್ ಚಿತ್ರಕ್ಕೆ ರಿಶಿಕುಮಾರ್‌ಸ್ವಾಮಿ ಕಂಠಸಿರಿ
Posted date: 26 Tue, Nov 2013 – 09:30:16 AM

 ಚೌಡೇಶ್ವರಿ ಸಿನಿ ಚಿತ್ರಾಲಯ ಲಾಂಛನದಲ್ಲಿ ಚೌಡರೆಡ್ಡಿ(ಬಾಗೇಪಲ್ಲಿ) ಅವರು ನಿರ್ಮಿಸುತ್ತಿರುವ ‘೨೪ ಕ್ಯಾರೆಟ್‘ ಚಿತ್ರದ ‘ಹುಟ್ಟಿನ ಟೇಶನ್ನು ಬಿಟೈತೆ ಜೀವ ಹತೈತೇ ಪ್ರೀತಿಯ ತೇರ ಬಂಡಿ‘ ಎಂಬ ಹಾಡನ್ನು ರಿಶಿಕುಮಾರ್‌ಸ್ವಾಮಿ ಹಾಡಿದ್ದಾರೆ. ಈ ಹಾಡನ್ನು ಅವರೇ ಬರೆದಿದ್ದಾರೆ ಎಂದು ನಿರ್ದೇಶಕ ಎಸ್.ಉಮೇಶ್ ತಿಳಿಸಿದ್ದಾರೆ.
   ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಸಂಗೀತ ನೀಡುತ್ತಿದ್ದಾರೆ. ದೀಪು ಛಾಯಾಗ್ರಹಣ, ಸಂಜೀವರೆಡ್ಡಿ ಸಂಕಲನ, ಬಾಬುಖಾನ್ ಕಲಾ ನಿರ್ದೇಶನ, ನಂಜುಂಡಿನಾಗರಾಜ್, ಡೈನಾಮೆಟ್ ಶಿವು ಸಾಹಸ ನಿರ್ದೇಶನವಿರುವ ಈ ಚಿತ್ರದ ಸಹ ನಿರ್ಮಾಪಕರು ಸಿ.ಎಂ.ಕೃಷ್ಣಪ್ಪ.
   ವಿರಾಟ್ ಹಾಗೂ ಪೂಜಾ ಎಂಬ ನೂತನ ಪ್ರತಿಭೆ ನಾಯಕ, ನಾಯಕಿಯಾಗಿ ನಟಿಸುತ್ತಿರುವ ‘೨೪ ಕ್ಯಾರೆಟ್‘ ಚಿತ್ರದ ತಾರಾಬಳಗದಲ್ಲಿ ರಿಶಿಕುಮಾರ ಸ್ವಾಮೀಜಿ, ರಂಗಾಯಣರಘು, ಶೋಭ್‌ರಾಜ್, ಸುರೇಶ್ ಮಂಗಳೂರು, ಧನಂಜಯ್, ಸುಧಾಬೆಳವಾಡಿ, ಪೆಟ್ರೋಲ್ ಪ್ರಸನ್ನ, ಅಮರನಾಥ್ ಆರಾಧ್ಯಾ, ಕರುಣಾಕರ್, ಕೃಷ್ಣಕುಮಾರ್ ಮುಂತಾದವರಿದ್ದಾರೆ. ರಿಶಿಕುಮಾರ್ ಸ್ವಾಮೀಜಿ ಪುತ್ರಿ ಲಿಖಿತ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed