`ಆರ್ಯನ್` ಚಿತ್ರಕ್ಕೆ ಮೂರನೇ ಹಂತದ ಚಿತ್ರೀಕರಣ
Posted date: 18 Mon, Nov 2013 – 10:34:51 PM

ಡಿ.ಕೇಶವ್ ಫ಼ಿಲಂಸ್ ಲಾಂಛನದಲ್ಲಿ ಡಿ.ಕಮರ್ ಅವರು ನಿರ್ಮಿಸುತ್ತಿರುವ ‘ಅರ್ಯನ್ ಚಿತ್ರದ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಚಿತ್ರ ಸಿದ್ದವಾಗುವಷ್ಟರಲ್ಲೇ ‘ಅರ್ಯನ್ ಚಿತ್ರದ ನಿರ್ದೇಶಕ ಡಿ.ರಾಜೇಂದ್ರಬಾಬು ನಿಧನರಾಗಿದ್ದು ನೋವಿನ ಸಂಗತಿ. ಈಗ ಚಿತ್ರದ ನಿರ್ದೇಶನದ ಜವಾಬ್ದಾರಿಯನ್ನು ಚಿ.ಗುರುದತ್ ಹೊತ್ತಿದ್ದಾರೆ.
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ರಮ್ಯ.  ಶರತ್‌ಬಾಬು, ಬುಲೆಟ್‌ಪ್ರಕಾಶ್, ವಿನಯಾಪ್ರಸಾದ್, ಅರ್ಚನಾಗುಪ್ತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಚಂದ್ರಶೇಖರ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಜನಾರ್ದನ್ ಮಹರ್ಷಿ ಸಂಭಾಷಣೆ ಬರೆದಿದ್ದಾರೆ. ಜೆಸ್ಸಿಗಿಫ಼್ಟ್ ಸಂಗೀತ ನಿರ್ದೇಶನದ ‘ಅರ್ಯನ್ ಚಿತ್ರದ ಹಾಡುಗಳನ್ನು ಜಯಂತಕಾಯ್ಕಿಣಿ, ಕವಿರಾಜ್, ಯೋಗರಾಜಭಟ್, ನಾಗೇಂದ್ರಪ್ರಸಾದ್ ಬರೆದಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed