ಈ ವಾರ ತೆರೆಗೆ `ಗಜಕೇಸರಿ`
Posted date: 19 Mon, May 2014 – 10:31:55 PM

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸಿರುವ ‘ಗಜಕೇಸರಿ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಛಾಯಾಗ್ರಾಹಕರಾಗಿ ಖ್ಯಾತರಾಗಿರುವ ಎಸ್.ಕೃಷ್ಣ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಸತ್ಯಹೆಗ್ಡೆ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ನಂಜುಂಡಸ್ವಾಮಿ ಕಲಾನಿರ್ದೇಶನ, ಗಣೇಶ್, ರವಿವರ್ಮ ಸಾಹಸ ನಿರ್ದೇಶನ ಹಾಗೂ ವಿಜಯಕುಮಾರ್, ಭರತ್ ಅವರ ನಿರ್ಮಾಣ ನಿರ್ವಹಣೆ ‘ಗಜಕೇಸರಿ‘ ಚಿತ್ರಕ್ಕಿದೆ.
   ಯಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಮೂಲ್ಯ. ಅನಂತ್‌ನಾಗ್, ಶ್ರೀನಿವಾಸಪ್ರಭು, ರಂಗಾಯಣರಘು, ಅಶೋಕ್, ಶಿವರಾಂ, ಸಾಧುಕೋಕಿಲ, ಪ್ರಭಾಕರ್, ಜಾನ್‌ವಿಜಯ್, ಶಬಾಸ್‌ಖಾನ್, ಜಯ, ಶಂಕರ್‌ಅಶ್ವತ್, ಹೊನ್ನವಳ್ಳಿ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed