ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ನಾಗರಾಜ್ ಅವರು ನಿರ್ಮಿಸಿರುವ ‘ಮಿಸ್ಟರ್ ೪೨೦ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪ್ರದೀಪ್ರಾಜ್(ಕಿರಾತಕ ಖ್ಯಾತಿ) ಈ ಚಿತ್ರದ ನಿರ್ದೇಶಕರು. ಇವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಆರ್.ಗಿರಿ ಅವರ ಛಾಯಾಗ್ರಹಣವಿದೆ. ಚಂದ್ರು ಸಾಹಸ ನಿರ್ದೇಶನ, ರಾಮು, ಮುರಳಿ, ಶಿವು ನೃತ್ಯ ನಿರ್ದೇಶನ, ಕುಮಾರ್ ಸಂಕಲನವಿರುವ ಈ ಚಿತ್ರಕ್ಕೆ ಮೋಹನ್ ಪಂಡಿತ್ ಅವರ ಕಲಾ ನಿರ್ದೇಶನವಿದೆ.
ಗೋಲ್ಡನ್ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಪ್ರಣಿತಾ. ರಂಗಾಯಣ ರಘು, ಸಾಧುಕೋಕಿಲಾ, ಚಿಕ್ಕಣ್ಣ, ಪಂಕಜ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.