ಕೆ.ಆರ್.ಪುರಂನಲ್ಲಿ ‘ಬೆಳ್ಳಿ
Posted date: 19 Mon, May 2014 – 10:15:36 PM

ಯಶಸ್ವಿನಿ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರು ನಿರ್ಮಿಸುತ್ತಿರುವ ‘ಬೆಳ್ಳಿ‘ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ನಾಯಕ ಹಳ್ಳಿಯಲ್ಲಿ ವಾಸಿಸುತ್ತಿರುತ್ತಾನೆ. ಆತನ ಸ್ನೇಹಿತರು ನಾಯಕನನ್ನು ಹಳ್ಳಿಯಿಂದ ನಗರಕ್ಕೆ ಕರೆತರುವ ಸನ್ನಿವೇಶವನ್ನು ಕೆ.ಆರ್.ಪುರಂನಲ್ಲಿ ನಿರ್ದೇಶಕರು ಚಿತ್ರಿಸಿಕೊಂಡಿದ್ದಾರೆ. ಶಿವರಾಜಕುಮಾರ್, ವಿನೋದ್‌ಪ್ರಭಾಕರ್, ದೀಪಕ್, ಪ್ರಶಾಂತ್, ವೆಂಕಟೇಶ್ ಹಾಗೂ ಗುರುದತ್ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
    ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಶ್ರೀಧರ್ ಸಂಗೀತ ನೀಡುತ್ತಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
    ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕೃತಿ ಖರಬಂದ, ವಿನೋದ್‌ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ, ಶ್ರೀನಿವಾಸಮೂರ್ತಿ, ರಮೇಶ್‌ಭಟ್, ನಾಗರಾಜ್, ಹರೀಶ್ ರೈ, ಲೋಕಿ, ನೀನಾಸಂ ಮಂಜು, ಭಾಸ್ಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರವಿಂದ್‌ರಾವ್ ಕಾರ್ಯಕಾರಿ ನಿರ್ಮಾಪಕರಾಗಿರುವ ‘ಬೆಳ್ಳಿ‘ ಚಿತ್ರಕ್ಕೆ ಕೆ.ಜೆ.ರಾಜಶೇಖರ್ ಸಹ ನಿರ್ಮಾಪಕರಾಗಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed