ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಉತ್ತಮ ಫಲಿತಾಂಶ : ರಮೇಶ್ ಅರವಿಂದ್
Posted date: 31 Sun, Mar 2024 11:37:14 PM
ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ  ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ

ಯಾವುದೇ ಕ್ಷೇತ್ರದಲ್ಲಿ ಮಾಡಿದ  ಕೆಲಸವನ್ನೇ ಮಾಡುತ್ತಾ ಅದರಲ್ಲಿ ಬದಲಾವಣೆ ಬಯಸಿದರೆ ಎಂದಿಗೂ ಸಾಧ್ಯವಿಲ್ಲ ಹೀಗಾಗಿ  ಫಲಿತಾಂಶ ಬೇಕಾದರೆ ಬದಲಾವಣೆ ಪ್ರಸ್ತುತ ದಿನಮಾನಗಳಲ್ಲಿ ಅಗತ್ಯ ಮತ್ತು ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜಿಸಿದ್ದ "ಸಿನಿಮಾ ಮಾಧ್ಯಮ ಸ್ಥಿತಿ-ಗತಿ"  ಹಾಗೂ ಸದಸ್ಯರಿಗೆ ಗುರಿತನ ಚೀಟಿ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು  ಜೀವನದಲ್ಲಿ ಮುಂದೆ ಬರಬೇಕು ಎನ್ನುವ ಆಸೆ ಮತ್ತು ಗುರಿ ಇರುವವರು ಬದಲಾವಣೆಗೆ ಒಗ್ಗಿಕೊಳ್ಳುವುದು ಅಗತ್ಯ ಎಂದು ಹೇಳಿದರು

ಇತ್ತೀಚಿನ ದಿನಗಳಲ್ಲಿ ಒಟಿಟಿ ಮೂಲಕ ಚಿತ್ರಗಳು ಕೈಗೆಟುಕುತ್ತಿವೆ. ಹೀಗಾಗಿ ನಿಗದಿತ ಸಮಯಕ್ಕೆ ಚಿತ್ರಮಂದಿರಕ್ಕೆ ಹೋಗಿ ಚಿತ್ರ ನೋಡುವವರ ಸಂಖ್ಯೆ ಕಡಿಮೆ ಆಗ್ರಾ ಇದೆ ಪ್ರೇಕ್ಷಕನ ಸಮಯಕ್ಕೆ ಸಿಗುವುದೇ ಓಟಿಟಿ.  ಹೀಗಾಗಿ ತಾವು ಇರುವ ಕಡೆಯಲ್ಲಿ ಸಿನಿಮಾ ನೋಡುವ ಪರಿಪಾಠ ಹೆಚ್ಚಾಗಿದೆ  ಎಂದರು.

ಪ್ರೇಕ್ಷಕನ ಸಮಯಕ್ಕೆ ಗೌರವ ಕೊಡುವ ಕೆಲಸ ಆಗಬೇಕು ಆಗ ಮಾತ್ರ ಜನರನ್ನ ಚಿತ್ರಮಂದಿರದ ಕಡೆ ಕರೆತರಲು ಸಾಧ್ಯ. ಅದೇ ರೀತಿ ಪ್ರತಿಯೊಬ್ಬ ನಟನಲ್ಲಿ,ಮಾಧ್ಯಮದವರಲ್ಲಿ ಒಂದೊಂದು ವಿಶೇಷತೆಗಳಿವೆ ನಮ್ಮ ಸಾಮರ್ಥ್ಯವನ್ನ ಅರಿತು ವಿಭಿನ್ನ ಮತ್ತು ವಿಶೇಷವಾಗಿ ಕಾಣಿಸಬೇಕು ಎನ್ನುವ ಕಿವಿಮಾತು ಹೇಳಿದರು

ಬದುಕುಗಾಗಿ ಪ್ರತಿಯೊಬ್ಬರೂ ಒಂದೊಂದು ವೇಷ ಹಾಕುತ್ತಿದ್ದಾರೆ ಆದರೆ ಅವರು ತಮ್ಮ ಆತ್ಮವನ್ನು ಮಾರಾಟ ಮಾಡಿಕೊಳ್ಳಬಾರದು. ಅದೊಂದನ್ನು ಜೋಪಾನವಾಗಿ ಇಟ್ಟುಕೊಂಡರೆ ಅಲ್ಲಿ ನಮ್ಮ ಉಳಿಗಾಲ ಇದೆ ಎಂದು ಹೇಳಿದರು.

ಹಿರಿಯ ನಿರ್ದೇಶಕ ಪಿ ಶೇಷಾದ್ರಿ ಮಾತನಾಡಿ, ಚಿತ್ರರಂಗ ಇಂದು ಉದ್ಯಮವಾಗಿ ಮಾರ್ಪಟ್ಟಿದೆ .ಇದೇ ವಿಷಯಕ್ಕಾಗಿ ಹಿರಿಯ ನಿರ್ದೇಶಕ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಚಿತ್ರರಂಗವನ್ನು ಕಲೋದ್ಯಮ ಎಂದು ಕರೆದಿದ್ದಾರೆ ಅದು ಪ್ರಸ್ತುತವೂ ಕೂಡ ಎಂದರು.

ಮೂಕಿ ಚಿತ್ರ ಆರಂಭ ಪರಿಗಣಿಗೆ ತೆಗೆದುಕೊಂಡರೆ ಕನ್ನಡ ಚಿತ್ರರಂಗಕ್ಕೆ ನೂರು ವರ್ಷಗಳು ಪೂರ್ಣಗೊಂಡಿದೆ ಆದರೆ ಟಾಕಿ ಚಿತ್ರವನ್ನು ನಾವು ಗಣನೆಗೆ ತೆಗೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಈಗ 90 ವರ್ಷದ ಸಂಭ್ರಮ ಈ ಒಂಬತ್ತು ದಶಕಗಳ ಅವಧಿಯಲ್ಲಿ ಬರೋಬ್ಬರಿ ಐದೂವರೆ ಸಾವಿರ ಚಿತ್ರಗಳು ತೆರೆಗೆ ಬಂದಿವೆ. ಚಿತ್ರರಂಗ ಸರಿ ಇಲ್ಲ ಎಂದಿದ್ದರೆ ಪ್ರತಿವರ್ಷವೂ ಸುಮಾರು 250ಕ್ಕೂ ಅಧಿಕ ಚಿತ್ರಗಳು ನಿರ್ಮಾಣವಾಗುತ್ತಿರಲಿಲ್ಲ ಚಿತ್ರರಂಗದ ಸ್ಥಿತಿ ಚೆನ್ನಾಗಿಯೇ ಇದೆ ಎಂದು ಅವರು ಹೇಳಿದರು

ಸಾಮಾನ್ಯವಾಗಿ ನಾವು ಪರಭಾಷೆಯ ಚಿತ್ರಗಳು ಚೆನ್ನಾಗಿ ಬರುತ್ತಿದೆ ಅವರಂತೆ ನಾವು ಚಿತ್ರ ಮಾಡುತ್ತಿಲ್ಲ ಎನ್ನುವ ಬಗ್ಗೆ ಹಾಗಾಗಿ ಮಾತನಾಡುತ್ತೇವೆ ಆದರೆ ಇತ್ತೀಚೆಗೆ ನನಗೆ ಮಲಯಾಳಂ ,ಮರಾಠಿ ಸೇರಿದಂತೆ ವಿವಿಧ ಭಾಷೆಗಳ ಸಿನಿಮಾ ಗಳನ್ನ ನೋಡುವ ಅವಕಾಶ ಸಿಕ್ಕಿತ್ತು ಆ ಸಮಯದಲ್ಲಿ ಅಲ್ಲಿನ ನಟ ನಟಿಯರು ತಂತ್ರಜ್ಞರ ಜೊತೆ ಮಾತನಾಡುವಾಗ ನಮ್ಮ ಸಿನಿಮಾ ರಂಗ ಸರಿ ಇಲ್ಲ ನಿಮ್ಮದೇ ಚಿತ್ರರಂಗ ಚಂದ ಎಂದು ಹೇಳುತ್ತಿದ್ದರು ಇದನ್ನೆಲ್ಲ ಗಮನಿಸಿದರೆ ಯಾವುದೇ ಚಿತ್ರರಂಗದ ಸರಾಸರಿ ಯಶಸ್ಸು ಶೇಕಡ ಐದರಿಂದ ಹತ್ತರಷ್ಟು ಮಾತ್ರ ಎಂದು ಅವರು ತಿಳಿಸಿದರು

ಹಿರಿಯ ಪತ್ರಕರ್ತ ಜೋಗಿ ಮಾತನಾಡಿ ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನ ನೋಡುವ ರೀತಿಯೇ ಬೇರೆಯಾಗಿದೆ. ಚಿತ್ರವೊಂದರ ಟೀಸರ್ ಬಿಡುಗಡೆಯಾದರೆ ಆ ಕ್ಷಣವೇ ಅದರ ಸುದ್ದಿ ಬರಬೇಕು ಪತ್ರಿಕೆಯಲ್ಲಿ ನಾಳೆ ಬರುವ ತನಕ ಅವರಿಗೆ ಕಾಯಲು ಸಮಯವಿಲ್ಲ ನಾವು ಸುದ್ದಿ ಬರೆಯುವ ಸಮಯದಲ್ಲಿ ಟೀಸರ್ ನ ವೀಕ್ಷಣೆ ಲಕ್ಷ ಲಕ್ಷ ದಾಟಿರುತ್ತದೆ ಅದನ್ನು ಬರೆಯಿರಿ ಎನ್ನುವ ಒತ್ತಡವು ನಮ್ಮ ಮೇಲೆ ಇರುತ್ತದೆ .ಇತ್ತೀಚಿನ ದಿನಗಳಲ್ಲಿ ಕನ್ನಡ ಪತ್ರಕರ್ತರನ್ನು ನೋಡುವ ಸ್ಥಿತಿಯೇ ಬೇರೆಯಾಗಿದೆ ಎಂದು ಅವರು ಹೇಳಿದರು

ಸಿನಿಮಾ ನೋಡಿ   ಹೊರ ಬಂದಾಗ ಕಥೆ ಹೇಗಿದೆ ಚಿತ್ರ ಹೇಗಿದೆ ಎನ್ನುವುದನ್ನು ಕೇಳುವ ಬದಲು ಚಿತ್ರಕ್ಕೆ ಎಷ್ಟು ಸ್ಟಾರ್ ಕೊಡುತ್ತೀರಿ ಎಂದು ಕೇಳುವ ಪರಿಪಾಠ ಹೆಚ್ಚಾಗಿದೆ ಕನಿಷ್ಠ ಮೂರು ಸ್ಟಾರ್ ಕೊಡಲೇಬೇಕು. ವಿಮರ್ಶೆ ಮಾಡುವನ್ನು ಅರಗಿಸಿಕೊಳ್ಳುವ ಮನಸ್ಥಿತಿಯೇ ಇಲ್ಲ ಎಲ್ಲವೂ ಪರವಾಗಿಯೇ ಬರಬೇಕು ಎನ್ನುವ ಉದ್ದೇಶ ಚಿತ್ರ ತಂಡದ್ದು ಎಂದು ತಿಳಿಸಿದರು

ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷ ಬಾ.ನಾ ಸುಬ್ರಹ್ಮಣ್ಯ ಸೇರಿದಂತೆ ಪದಾಧಿಕಾರಿಗಳು
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed