ಕೆ.ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ.ಮಂಜು ಅವರು ನಿರ್ಮಿಸುತ್ತಿರುವ ‘ದಿಲ್ರಂಗೀಲಾ ಚಿತ್ರಕ್ಕೆ ಗೋವಾದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಗಣೇಶ್, ರಚಿತಾರಾಂ, ರಂಗಾಯಣರಘು, ದತ್ತಣ್ಣ ಮುಂತಾದವರ ಅಭಿನಯದಲ್ಲಿ ೨೦ದಿನಗಳ ಕಾಲ ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆಯಲಿದೆ.
ಗೋಲ್ಡನ್ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಪ್ರೀತಂಗುಬ್ಬಿ ನಿರ್ದೇಶಿಸುತ್ತಿದ್ದಾರೆ. ಹಿಂದೆ ಗಣೇಶ್ ಅಭಿನಯದ ‘ಮಳೆಯಲಿ ಜೊತೆಯಲಿ ಚಿತ್ರವನ್ನು ಪ್ರೀತಂಗುಬ್ಬಿ ಅವರೇ ನಿರ್ದೇಶಿಸಿದ್ದರು. ರಚಿತರಾಂ, ಪ್ರಿಯಾಂಕರಾವ್, ದತ್ತಣ್ಣ, ರಂಗಾಯಣರಘು, ಅಚ್ಯುತಕುಮಾರ್, ಯಮುನ, ಶ್ರೀನಿಧಿ, ಗಿರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಅರ್ಜುನ್ಜನ್ಯ ಸಂಗೀತ ನಿರ್ದೇಶನ, ದೀಪು.ಎಸ್.ಕುಮಾರ್ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಯೋಗಿ ಸಹನಿರ್ದೇಶನವಿರುವ ‘ದಿಲ್ರಂಗೀಲಾಕ್ಕೆ ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಯೋಗರಾಜ್ಭಟ್, ಜಯಂತಕಾಯ್ಕಿಣಿ ಗೀತರಚನೆ ಮಾಡಿದ್ದಾರೆ.