ರಾಮು ಫ಼ಿಲಂಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸುತ್ತಿರುವ ‘ರಾಜ್ ವಿಷ್ಣು‘ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ರೇಣುಕಾಂಬ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
ಕೆ.ಮಾದೇಶ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ರಾಜೇಶ್ ಕಾಟ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮುರಳಿ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ವಿನೋದ್ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಅನಿಲ್ ಕುಮಾರ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಕಥೆಯನ್ನು ಪೊನ್ರಾಂ ಬರೆದಿದ್ದಾರೆ. ಚಿತ್ರಕಥೆಯನ್ನು ಜನಾರ್ದನ್ ಮಹರ್ಷಿ, ಸಂಭಾಷಣೆಯನ್ನು ರಘು ಬರೆದಿದ್ದಾರೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ಕವಿರಾಜ್ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ.
ಶರಣ್, ಚಿಕ್ಕಣ್ಣ, ವೈಭವಿ, ಸಾಧುಕೋಕಿಲ, ಶ್ರೀನಿವಾಸಮೂರ್ತಿ, ಭಜರಂಗಿ ಲೋಕಿ, ಸುಚೀಂದ್ರ ಪ್ರಸಾದ್, ಮಿಮಿಕ್ರಿ ಗೋಪಿ, ವೀಣಾ ಸುಂದರ್, ಮಿಮಿಕ್ರಿ ದಯಾನಂದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಶ್ರೀಮುರುಳಿ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.