‘ಮುಂಗಾರು ಮಳೆ - ೨ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಶ್ಲಾಘನೆ
Posted date: 30 Tue, Aug 2016 – 09:44:29 AM

ಇ.ಕೆ ಪಿಕ್ಚರ್ಸ್ ಲಾಂಛನದಲ್ಲಿ ಜಿ.ಗಂಗಾಧರ್ ಅವರು ನಿರ್ಮಿಸಿರುವ  ‘ಮುಂಗಾರು ಮಳೆ - ೨ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರವನ್ನು ನೀಡಿದಲ್ಲದೆ, ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದೆ. ಚಿತ್ರ ಸೆಪ್ಟಂಬರ್ ೯ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶಶಾಂಕ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ, ಸ್ಟಂಟ್ ಶಿವ ಸಾಹಸ ನಿರ್ದೇಶನ ಹಾಗೂ ಹರ್ಷ, ಮುರಳಿ, ಕಲೈ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಕ್ರೇಜಿಸ್ಟಾರ್ ರವಿಚಂದ್ರನ್, ನೇಹ ಶೆಟ್ಟಿ, ಶಿಲ್ಪಾ ಮಂಜುನಾಥ್, ಐಂದ್ರಿತಾ ರೇ, ಸಾಧುಕೋಕಿಲ, ರವಿಶಂಕರ್, ತಬಲ ನಾಣಿ  ಮುಂತಾದವರಿದ್ದಾರೆ.  

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed