ಮೇಲುಕೋಟೆಯಲ್ಲಿ ‘ರಾಜ್ ವಿಷ್ಣು’ ಚಿತ್ರೀಕರಣ ಶುರು!
Posted date: 21 Thu, Apr 2016 – 12:30:08 PM

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ರಾಮು ಫಿಲಂಸ್. ಈ ವರೆಗೆ ಈ ಸಂಸ್ಥೆಯಲ್ಲಿ ಬಹುತೇಕ ಸಾಹಸ ಪ್ರಧಾನ ಸಿನಿಮಾಗಳೇ ನಿರ್ಮಾಣಗೊಂಡಿವೆ. ಆದರೆ ಮೊದಲ ಬಾರಿಗೆ ನಿರ್ಮಾಪಕ ರಾಮು ಅವರು ಹಾಸ್ಯ ಕಥಾವಸ್ತು ಹೊಂದಿರುವ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಹೆಸರು ‘ರಾಜ್ ವಿಷ್ಣು’.
ಚಿತ್ರದ ಮುಹೂರ್ತ ಸಮಾರಂಭ ಏಪ್ರಿಲ್ ೧೮ರ ಸೋಮವಾರ ಮೇಲುಕೋಟೆಯಲ್ಲಿ ನಡೆದಿದೆ. ಮೈಸೂರು ಸುತ್ತಮುತ್ತ ಚಿತ್ರಕ್ಕೆ ೬೦ ದಿನಗಳ ಚಿತ್ರೀಕರಣ ನಡೆಯಲಿದೆ.
ತಮಿಳಿನಲ್ಲಿ ನಿರ್ಮಾಣಗೊಂಡು ಯಶಸ್ವಿಯಾಗಿದ್ದ ‘ರಜನಿ ಮುರುಘ’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗುತ್ತಿದೆ. ಈ ಹಿಂದೆ ‘ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಮ್ ಅವರು ‘ರಜನಿ ಮುರುಘ’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆಯುತ್ತಿದ್ದಾರೆ.
ಶರಣ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಮುಂಬೈ ಮೂಲದ ವೈಭವಿ ಅವರು ನಾಯಕಿಯಾಗಿದ್ದಾರೆ.  ಚಿಕ್ಕಣ್ಣ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.
ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಮಾದೇಶ್ ನಿರ್ದೇಶನದ ಈ ಚಿತ್ರಕ್ಕೆ  ರಾಜೇಶ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮುರಳಿ ನೃತ್ಯ, ಥ್ರಿಲ್ಲರ್ ಮಂಜು ಅವರ ಸಾಹಸ ಸಂಯೋಜನೆ, ಈಶ್ವರಿ ಕುಮಾರ್ ಕಲಾ ನಿರ್ದೇಶನ,  ಯೋಗರಾಜ್ ಭಟ್, ಡಾ. ವಿ. ನಾಗೇಂದ್ರ ಪ್ರಸಾದ್ ಮತ್ತು ಕವಿರಾಜ್ ಅವರ ಗೀತರಚನೆ, ರಘು ನಿಡುವಳ್ಳಿ ಸಂಭಾಷಣೆ, ಜನಾರ್ಧನ ಮಹರ್ಷಿ ಚಿತ್ರಕತೆ, ಸುರೇಶ್ ಗೋಸ್ವಾಮಿ ಸಹ ನಿರ್ದೇಶನ ಹಾಗೂ ಅನಿಲ್ ಕುಮಾರ್ ಅವರ ನಿರ್ಮಾಣ ನಿರ್ವಹಣೆಯಿದೆ.  

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed