ಚಲನಚಿತ್ರ ಪತ್ರಕರ್ತ ಹಾಗೂ ನಟ ಯತಿರಾಜ್ಗೆ ೧೦೦ ಚಿತ್ರಗಳ ನಟನೆಗಾಗಿ ಅಭಿನಂದನೆ ಮತ್ತು ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ಅಖಿಲ ಭಾರತ ಕಾರ್ಯನಿರ್ವಾಹಕ ಕನ್ನಡ ಪತ್ರಿಕಾ ಸಂಪಾದಕರ ಒಕ್ಕೂಟದಿಂದ ನೀಡಿ ಗೌರವಿಸಲಾಯಿತು. ಚಿತ್ರದಲ್ಲಿ ಮಾಜಿ ವಿರೋಧ ಪಕ್ಷದ ನಾಯಕ ವಿ.ಎಸ್. ಉಗ್ರಪ್ಪ, ಪಂಚಮಶಾಲಿ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ಚಲನಚಿತ್ರ ಕಲಾವಿದ ಬ್ಯಾಂಕ್ ಜನಾರ್ಧನ್, ಹಿರಿಯ ಐ.ಎ.ಎಸ್. ಅಧಿಕಾರಿ ಡಿ.ಎಸ್. ಅಶ್ವಥ್, ಕೆ.ಎ.ಎಸ್. ಅಧಿಕಾರಿ ಮಲ್ಲಿನಾಥ್ ಮತ್ತು ಸಂಸ್ಥೆಯ ಅಧ್ಯಕ್ಷ ರಮೇಶ ಸುರ್ವೆ ಉಪಸ್ಥಿತರಿದ್ದರು.