ಸೌಂದರ್ಯ ಜಗದೀಶ್ ಫ಼ಿಲಂ ಲಾಂಛನದಲ್ಲಿ ಸೌಂದರ್ಯ ಜಗದೀಶ್ ಅವರು ನಿರ್ಮಿಸುತ್ತಿರುವ ‘ರಾಂಲೀಲಾ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಈ ವರೆಗೂ ಮುವತ್ತು ದಿನಗಳ ಚಿತ್ರೀಕರಣ ನಡೆದಿದೆ. ಮೇ ೨೦ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ಯುರೋಪ್ನಲ್ಲಿ ಈ ಹಂತದ ಚಿತ್ರೀಕರಣ ನಡೆಯಲಿದೆ.
ವಿಜಯ್ ಕಿರಣ್ ನಿರ್ದೇಶನದ ಈ ಚಿತ್ರಕ್ಕೆ ಅನೂಪ್ ರುಬೆನ್ಸ್ ಅವರ ಸಂಗೀತ ನಿರ್ದೇಶನವಿದೆ. ಭರಣಿ ಛಾಯಾಗ್ರಹಣ, ಜೋ.ನಿ.ಹರ್ಷ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಹರ್ಷ , ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಮೂಲ್ಯ. ಸಾಧುಕೋಕಿಲ, ಶೋಭ್ರಾಜ್, ರವಿಕಾಳೆ, ತುಳಸಿ, ರವಿಶಂಕರ್ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.