ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸುತ್ತಿರುವ ‘ಟೋಪಿವಾಲ’ ಚಿತ್ರದ ಚಿತ್ರೀಕರಣಕ್ಕಾಗಿ ಚಿತ್ರತಂಡ ಸ್ವಿಜರ್ಲ್ಯಾಂಡ್ಗೆ ಪಯಣಿಸಿದೆ. ಒಂದು ಗೀತೆ ಹಾಗೂ ಕೆಲವು ಮಾತಿನ ಭಾಗದ ಸನ್ನಿವೇಶಗಳ ಚಿತ್ರೀಕರಣ ಅಲ್ಲಿ ನಡೆಯಲಿದೆ. ಸೂಪರ್ಸ್ಟಾರ್ ಉಪೇಂದ್ರ ಹಾಗೂ ಭಾವನ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಪ್ರದೀಪ್ ಅಂತೋಣಿ ನೃತ್ಯ ನಿರ್ದೇಶನ ಮಾಡುಲಿದ್ದಾರೆ.
ಶ್ರೀನಿ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ‘ಟೋಪಿವಾಲ’ನಿಗೆ ಕಥೆ, ಚಿತ್ರಕಥೆಯನ್ನು ಉಪೇಂದ್ರ ಅವರೇ ಬರೆದಿದ್ದಾರೆ. ಶ್ರೀಷ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಶ್ರೀ ಸಂಕಲನ, ರವಿವರ್ಮ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಕಲಾನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಭಾವನ(ಜಾಕಿ), ರಂಗಾಯಣರಘು, ರವಿಶಂಕರ್, ಮೈತ್ರೇಯ, ರಾಕ್ಲೈನ್ ಸುಧಾಕರ್, ರಾಜುತಾಳಿಕೋಟೆ, ಬಿರಾದಾರ್ ಮುಂತಾದವರಿದ್ದಾರೆ.