ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಚಾರ್ಮಿನಾರ್ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರವನ್ನು ನೀಡಿದೆ. ಫ಼ೆಬ್ರವರಿ ಎಂಟರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
‘ತಾಜ್ಮಹಲ್, ‘ಪ್ರೇಮ್ಕಹಾನಿ, ‘ಮೈಲಾರಿ, ‘ಕೋಕೋ ಚಿತ್ರಗಳ ನಂತರ ಆರ್.ಚಂದ್ರು ‘ಚಾರ್ಮಿನಾರ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಆರ್.ಚಂದ್ರು ಈ ಚಿತ್ರದ ನಿರ್ಮಾಪಕರು ಹೌದು.
ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಥ್ರಿಲ್ಲರ್ಮಂಜು ಅವರ ಸಾಹಸ ನಿರ್ದೇಶನವಿದೆ. ಇಮ್ರಾನ್, ಹರ್ಷ, ರಘು ನೃತ್ಯ ನಿರ್ದೇಶನವಿರುವ ‘ಚಾರ್ಮಿನಾರ್ ಚಿತ್ರದ ನಾಯಕರಾಗಿ ಲವ್ಲಿಸ್ಟಾರ್ ಪ್ರೇಮ್ ಅಭಿನಯಿಸಿದ್ದಾರೆ. ಮೇಘನಾ ಗಾಂವ್ಕರ್, ಕುಮುದ ನಾಯಕಿಯರಾಗಿರುವ ಈ ಚಿತ್ರದ ತಾರಾಬಳಗದಲ್ಲಿ ರಂಗಾಯಣ ರಘು, ಸಾಧುಕೋಕಿಲಾ, ಬುಲೆಟ್ ಪ್ರಕಾಶ್, ವಿದ್ಯಾಮೂರ್ತಿ, ಹೊನ್ನವಳ್ಳಿ ಕೃಷ್ಣ ಮುಂತಾದವರಿದ್ದಾರೆ. ಹರಿ ಸಂಗೀತವಿರುವ ಈ ಚಿತ್ರಕ್ಕೆ ಗುರುಕಿರಣ್ ಹಿನ್ನಲೆ ಸಂಗೀತ ನೀಡಿದ್ದಾರೆ.