ಶ್ರೀಸಾಯಿ ವಿನಾಯಕ ಫ಼ಿಲಂಸ್ ಲಾಂಛನದಲ್ಲಿ ಬಿ.ವಿಜಯಕುಮಾರ್ ಅವರು ನಿರ್ಮಿಸಿರುವ ‘ಸ್ವಚ್ಛಭಾರತ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರವನ್ನು ನೀಡಿದೆ ಹಾಗೂ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದೆ.
ಸದಭಿರುಚಿಯ ಚಿತ್ರವೊಂದನ್ನು ನಿರ್ಮಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿರ್ಮಾಪಕ ಬಿ.ವಿಜಯಕುಮಾರ್ ಅವರು ಸದ್ಯದಲ್ಲೇ ಚಿತ್ರದ ಆಡಿಯೋ ರಿಲೀಸ್ ಮಾಡುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ಪವಿತ್ರ ಪುಣ್ಯಕ್ಷೇತ್ರ ಕಾಶಿ, ವಾರಣಾಸಿಯ ರಮಣೀಯ ಸ್ಥಳಗಳಲ್ಲಿ ಚಿತ್ರಕ್ಕೆ ಚಿತ್ರೀಕರಣ ನಡೆದಿದೆ. ಬಿ.ಆರ್.ಕೇಶವ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಪ್ರಮೋದ್ ಅವರ ಛಾಯಾಗ್ರಹಣವಿದೆ. ಎಂ.ಎಸ್.ಮಾರುತಿ ಸಂಗೀತ ನಿರ್ದೇಶನ ಹಾಗೂ ಸಿದ್ದರಾಜು ಅವರ ಸಂಕಲನವಿರುವ ಈ ಚಿತ್ರಕ್ಕೆ ಶೇಷಗಿರಿ ಸಂಭಾಷಣೆ ಬರೆದಿದ್ದಾರೆ.
ಶಿವರಾಮಣ್ಣ, ಉಮೇಶ್ ಬಣಕಾರ್, ರಮೇಶ್ಭಟ್, ಎಂ.ಎಸ್.ಉಮೇಶ್, ಸುಂದರರಾಜ್, ಸ್ವಯಂವರ ಚಂದ್ರು, ರೇಣು, ಶರಾರ, ಕರಿಸುಬ್ಬು, ಪ್ರಜ್ವಲ್ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿರ್ಮಾಪಕ ಬಿ.ವಿಜಯಕುಮಾರ್ ಅವರು ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.