ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸುತ್ತಿರುವ ‘ಟೋಪಿವಾಲ’ ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ಪೂರ್ಣವಾಗಿದೆ. ಕ್ಲೈಮ್ಯಾಕ್ಸ್, ನಾಲ್ಕು ಹಾಡುಗಳು ಹಾಗೂ ಕೆಲವು ಮಾತಿನ ಭಾಗದ ಸನ್ನಿವೇಶಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈವರೆಗೂ ಬೆಂಗಳೂರು ಸುತ್ತಮುತ್ತ ನಲವತ್ತು ದಿನಗಳ ಚಿತ್ರೀಕರಣ ನಡೆದಿದೆ. ಇದೇ ತಿಂಗಳಲ್ಲಿ ಬೆಂಗಳೂರು, ಮಂಗಳೂರು, ಸ್ವಿಜರ್ಲ್ಯಾಂಡ್, ಪಾಂಡಿಚರಿಯಲ್ಲಿ ಹಾಡುಗಳ ಚಿತ್ರೀಕರಣ ನಡೆಯಲಿದೆ.
ಶ್ರೀನಿ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ಉಪೇಂದ್ರ ಅವರೇ ಬರೆದಿದ್ದಾರೆ. ಶ್ರೀಷ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಶ್ರೀ ಸಂಕಲನ, ರವಿವರ್ಮ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಕಲಾನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಭಾವನ(ಜಾಕಿ), ರಂಗಾಯಣರಘು, ರವಿಶಂಕರ್, ಮೈತ್ರೇಯ, ರಾಕ್ಲೈನ್ ಸುಧಾಕರ್, ರಾಜುತಾಳಿಕೋಟೆ, ಬಿರಾದಾರ್ ಮುಂತಾದವರಿದ್ದಾರೆ.