ಕೆಲವು ದಿನಗಳ ಹಿಂದೆ ಚಾಮರಾಜಪೇಟೆಯ ರಸ್ತೆಯೊಂದು ರಣರಂಗವಾಗಿ ಮಾರ್ಪಟಿತ್ತು. ನಾಯಕಿಯ ಮನ ಒಲಿಸಲು ಬಂದ ಯುವ ನಾಯಕನಿಗು ಹಾಗೂ ಸಾಹಸ ತಂಡದ ಸದಸ್ಯರಿಗೂ ನಡೆಯುತ್ತಿದ್ದ ಮಾರಾಮಾರಿ ಅದು. ಸ್ವಲ್ಪ ಹೊತ್ತಿನ ಹೊಡೆದಾಟದ ನಂತರ ಎದುರಾಳಿಯ ಮೇಲೆ ನಾಯಕ ಕಲ್ಲು ಎತ್ತಿ ಹಾಕುವ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಆ ಕಲ್ಲು ಜಾರಿ ಚಿತ್ರದ ನಾಯಕನಾಗಿ ಅಭಿನಯಿಸುತ್ತಿರುವ ಸೂರ್ಯ ಅವರ ಕಾಲ ಮೇಲೆ ಬಿದ್ದು ಪೆಟ್ಟಾಗಿದೆ. ಸದ್ಯ ‘ನಾರದ ವಿಜಯ ಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿದೆ. ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನದಲ್ಲಿ ಈ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿತ್ತು.