ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜು ಅವರು ನಿರ್ಮಿಸುತ್ತಿರುವ ‘ಐರಾವತ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹಳೇ ತಿರುಪತಿ ರಸ್ತೆಯಲ್ಲಿ ಆರು ದಿನಗಳ ಕಾಲ ನಡೆದಿದೆ. ದರ್ಶನ್, ಊರ್ವಶಿ ರೌತೆಲ, ಪ್ರಕಾಶ್ ರೈ ,ಅಶೋಕ್, ಜಿ.ಕೆ.ಗೋವಿಂದರಾವ್ ಹಾಗೂ ಸಾಹಸ ಕಲಾವಿದರು ಅಭಿನಯಿಸಿದ ಈ ಸಾಹಸ ಸನ್ನಿವೇಶಕ್ಕೆ ಖ್ಯಾತ ಸಾಹಸ ನಿರ್ದೇಶಕರಾದ ರಾಂಲಕ್ಷ್ಮಣ್ ಸಾಹಸ ನಿರ್ದೇಶನ ಮಾಡಿದ್ದಾರೆ. ಇದು ಚಿತ್ರದ ಕ್ಲೈಮ್ಯಾಕ್ಸ್ ಕೂಡ ಹೌದು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಊರ್ವಶಿ ರೌತೆಲ, ಪ್ರಕಾಶ್ ರೈ, ಸಾಧುಕೋಕಿಲ, ಅವಿನಾಶ್, ಅಶೋಕ್, ಜಿ.ಕೆ.ಗೋವಿಂದರಾವ್ ಮುಂತಾದವರಿದ್ದಾರೆ.
ಎ.ಪಿ.ಅರ್ಜುನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಶೇಖರ್ಚಂದ್ರ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಕಲೈ, ಗಣೇಶ್ ನೃತ್ಯ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ರಂಗಸ್ವಾಮಿ ಅವರ ನಿರ್ಮಾಣ ನಿರ್ವಹಣೆಯಿದೆ.