ಓಂಶಾಂತಿ ವಿಜಯ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅಮರ್ಚಂದ್ಜೈನ್ ಹಾಗೂ ವಿಜಯ್ ಸುರಾನಾ ಅವರು ನಿರ್ಮಿಸಿರುವ ‘ಜಿದ್ದಿ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಫ಼ೆಬ್ರವರಿಯಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಆರ್.ಅನಂತರಾಜು ನಿರ್ದೇಶನದ ಈ ಚಿತ್ರಕ್ಕೆ ಗಿರಿಧರ್ ದಿವಾನ್ ಸಂಗೀತ ನೀಡಿದ್ದಾರೆ. ನಿರಂಜನ್ಬಾಬು ಛಾಯಾಗ್ರಹಣ, ಸಂಜೀವರೆಡ್ಡಿ ಸಂಕಲನ, ಹರ್ಷ ನೃತ್ಯ ನಿರ್ದೇಶನ, ಬಾಬುಖಾನ್ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಶೇಷಗಿರಿ ಸಂಭಾಷಣೆ ಬರೆದಿದ್ದಾರೆ. ರವಿವರ್ಮರ ಸಾಹಸ ನಿರ್ದೇಶನವಿರುವ ‘ಜಿದ್ದಿಗೆ ಪನ್ನಾಲಾಲ್ ಕೊಠಾರಿ ಅವರ ಸಹ ನಿರ್ಮಾಣವಿದೆ.
ಪ್ರಜ್ವಲ್ದೇವರಾಜ್ ನಾಯರಾಗಿ ನಟಿಸಿರುವ ಈ ಚಿತ್ರದ ನಾಯಕಿಯರು ಅಂದ್ರಿತಾ ರೇ ಹಾಗೂ ಐಶ್ವರ್ಯನಾಗ್. ತಿಲಕ್, ಶ್ರೀನಿವಾಸಮೂರ್ತಿ, ಅಶೋಕ್, ಶಂಕರ್ಅಶ್ವತ್, ಸುಚೀಂದ್ರಪ್ರಸಾದ್, ವಿಜಯಸಾರಥಿ, ಯತಿರಾಜ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.