ಭಾಗ್ಯಲಕ್ಷ್ಮೀ ಕ್ರಿಯೇಷನ್ಸ್ ಲಾಂಛನದಲ್ಲಿ ಮಲ್ಲಿಕಾರ್ಜುನ ರೆಡ್ಡಿ ಅವರು ನಿರ್ಮಿಸುತ್ತಿರುವ ‘ನಿತ್ಯ ಜೊತೆ ಸತ್ಯ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ೩೨ದಿನಗಳ ಚಿತ್ರೀಕರಣ ನಡೆದಿದೆ.
ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಕಲ್ಯಾಣ್ ಸಾಮಿ ಅವರ ಛಾಯಾಗ್ರಹಣವಿದೆ. ರಘುರಾಂ ಸಂಗೀತ ನಿರ್ದೇಶನದ ಈ ಚಿತ್ರದ ತಾರಾಬಳಗದಲ್ಲಿ ಮನೀಶ್ಬಾಬು, ತೇಜಸ್ವಿನಿ, ದೇವರಾಜ್, ದಿನೇಶ್, ನಿವಾಸ್, ಆಶಾ ಮುಂತಾದವರಿದ್ದಾರೆ.