`ಮಹಾಕಾಳಿ` ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
Posted date: 01 Tue, Apr 2014 – 09:38:13 AM

 ಸಿಂಹಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ಅವರು ನಿರ್ಮಿಸುತ್ತಿರುವ ‘ಮಾಹಾಕಾಳಿ’ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗಾಗಲ್ಲೇ ಐವತ್ತು ದಿನಗಳ ನಿರಂತರ ಚಿತ್ರೀಕರಣ ನಡೆದಿದೆ. ಈ ಭಾಗದಲ್ಲಿ ಎರಡು ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಹಾಗೂ ಪಳನಿರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. ಇನ್ನೂ ಐದು ಹಾಡುಗಳು ಹಾಗೂ ಎರಡು ಸಾಹಸ ಸನ್ನಿವೇಶಗಳ ಚಿತ್ರೀಕರಣ ಬಾಕಿ ಇದೆ. ಎರಡು ಹಾಡುಗಳ ಚಿತ್ರೀಕರಣವನ್ನು ವಿದೇಶದಲ್ಲಿ ಚಿತ್ರಿಸುವ ಆಸೆ ನಿರ್ಮಾಪಕರದು.
    ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ. ಶ್ರೀನಿವಾಸಮೂರ್ತಿ, ಎಂ.ಎನ್.ಲಕ್ಷ್ಮೀದೇವಿ, ಪದ್ಮಿನಿಪ್ರಕಾಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅಜಯ್ ಕುಮಾರ್ ಅವರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ಎಸ್.ಮಹೇಂದರ್ ನಿರ್ದೇಶಿಸುತ್ತಿದ್ದಾರೆ. ಸೆಲ್ವಂ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅನಿಲ್‌ಕುಮಾರ್ ಸಂಭಾಷಣೆ ಬರೆದಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed