`ಲಕ್ಷ್ಮಣ` ಚಿತ್ರಕ್ಕೆ ಬಿರುಸಿನ ಚಿತ್ರೀಕರಣ
Posted date: 16 Thu, Jul 2015 – 08:45:02 AM

ಸಾಯಿರಂಗ ಸಿನಿಮಾಸ್ ಲಾಂಛನದಲ್ಲಿ ವತ್ಸಲಾರೇವಣ್ಣ ಅವರು ನಿರ್ಮಿಸುತ್ತಿರುವ ‘ಲಕ್ಷ್ಮಣ’ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಆರ್.ಚಂದ್ರು ನಿರ್ದೇಶನದ ಈ ಚಿತ್ರದ ನಾಯಕರಾಗಿ ಅನೂಪ್ ಅಭಿನಯಿಸುತ್ತಿದ್ದಾರೆ. ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮೇಘನರಾಜ್, ಬಾಹುಬಲಿ ಪ್ರಭಾಕರ್, ಸಾಧು ಕೋಕಿಲ, ಚಿಕ್ಕಣ್ಣ, ಪ್ರದೀಪ್ ರಾಹುತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ. ರವಿವರ್ಮ, ಥ್ರಿಲ್ಲರ್‌ಮಂಜು ಸಾಹಸ ನಿರ್ದೇಶನ ಹಾಗೂ ಮೋಹನ್ ಪಂಡಿತ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed