ಪದ್ಮಪ್ರಿಯ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ‘ವಿಜಯಾದಿತ್ಯ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇದೇ ತಿಂಗಳ ೨೪ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಧನಂಜಯ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಕಾವ್ಯಶೆಟ್ಟಿ, ಪಾರೂಲ್ ಯಾದವ್, ರವಿಶಂಕರ್ ಮುಂತಾದವರಿದ್ದಾರೆ. ನಿರ್ಭಯ್ ಚಕ್ರವರ್ತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಆನಂದಪ್ರಿಯ ಸಂಭಾಷಣೆ ಬರೆದಿದ್ದಾರೆ.
ವಿ.ಹರಿಕೃಷ್ಣ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಸೂರ್ಯ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ಮಾದ ಸಾಹಸ ನಿರ್ದೇಶನ, ವೀರೇಂದ್ರ ಪಾಟೀಲ್, ಶಿವು ಸಹನಿರ್ದೇಶನ ಈ ಚಿತ್ರಕ್ಕಿದೆ.