ಸ್ಕಂದ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಸನ್ನ ಮತ್ತು ಶಶಿಕಲಾಬಾಲಾಜಿ ಅವರು ನಿರ್ಮಿಸುತ್ತಿರುವ ‘ನೀರ್ದೋಸೆ’ ಚಿತ್ರಕ್ಕೆ ಅನೂಪ್ ಸೀಳಿನ್ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ಮುಕ್ತಾಯವಾಗಿದೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಚಿತ್ರದ ಹಾಡುಗಳ ಸೀಡಿ ಇದೇ ತಿಂಗಳಲ್ಲಿ ಬಿಡುಗಡೆಯಾಗಲಿದೆ.
ವಿಜಯ್ಪ್ರಸಾದ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ನಾಯಕರಾಗಿ ನವರಸ ನಾಯಕ ಜಗ್ಗೇಶ್ ಅಭಿನಯಿಸಿದ್ದಾರೆ. ಹರಿಪ್ರಿಯ, ದತ್ತಣ್ಣ, ಸುಮನ್ ರಂಗನಾಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸುಜ಼್ಞಾನ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸುರೇಶ್ ಅರಸ್ ಅವರ ಸಂಕಲನವಿದೆ. ನಾರಾಯಣ ಪಿಳ್ಳೈ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿದೆ.