ಕಿಚ್ಚ ಸುದೀಪ್ ಅರ್ಪಿಸುವ, ಈಶ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಎಸ್.ವಿ.ಸುರೇಶ್ ನಿರ್ದೇಶನದ ‘ಸ್ತ್ರೀಶಕ್ತಿ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.
ಸ್ತ್ರೀಭ್ರೂಣ ಹತ್ಯೆ, ಸ್ವಯಂಉದ್ಯೋಗ ಹೀಗೆ ಅನೇಕ ವಿಚಾರಗಳನೊಳಗೊಂಡಿರುವ ಈ ಚಿತ್ರ ಗುಜರಾತ್ನ ಗಾಂಧಿನಗರ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ.
ವಿ.ಮನೋಹರ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಬಿ.ಎಸ್.ಕೆಂಪರಾಜ್ ಅವರ ಸಂಕಲನವಿದೆ. ಶಶಿಧರ್ ಛಾಯಾಗ್ರಹಣ, ಹರ್ಷ ನೃತ್ಯ ನಿರ್ದೇಶನ, ಚಂದ್ರು ಸಾಹಸ ನಿರ್ದೇಶನ, ಅರುಣ್ಸಾಗರ್ ಕಲಾನಿರ್ದೇಶನವಿರುವ ಈ ಚಿತ್ರಕ್ಕೆ ಹೊ.ನ.ಸತ್ಯ ಕಥೆ, ಸಂಭಾಷಣೆ ಬರೆದಿದ್ದಾರೆ. ಅಚ್ಯುತರಾವ್ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ರಾಜೀವ್, ಸೋನು, ಶರತ್ಲೋಹಿತಾಶ್ವ, ಸುಂದರರಾಜ್, ಗೋಪಿನಾಥ್ಭಟ್, ತುಳಸಿಶಿವಮಣಿ, ಕಾಶಿ, ರಾಮಕೃಷ್ಣ ಮುಂತಾದವರಿದ್ದಾರೆ.