ಎಸ್.ವಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಸ್.ವಿ.ಬಾಬು ಅವರು ನಿರ್ಮಿಸಿರುವ ‘ಎಂದೆಂದಿಗೂ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಇಮ್ರಾನ್ ಸರ್ದಾರಿಯಾ ನಿರ್ದೇಶನದ ಈ ಚಿತ್ರಕ್ಕೆ ಜಯತೀರ್ಥ ಹಾಗೂ ಇಮ್ರಾನ್ ಸರ್ದಾರಿಯಾ ಚಿತ್ರಕಥೆ ಬರೆದಿದ್ದಾರೆ. ಸತ್ಯಪ್ರಕಾಶ್ ಸಂಭಾಷಣೆ, ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಶಿವಕುಮಾರ್ ಕಲಾ ನಿರ್ದೇಶನ ಹಾಗೂ ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ವಿ.ಹರಿಕೃಷ್ಣ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗಾರಾಜ್ ಭಟ್, ಕೆ.ಕಲ್ಯಾಣ್ ಹಾಗೂ ಎ.ಪಿ.ಅರ್ಜುನ್ ರಚಿಸಿದ್ದಾರೆ.
ಅಜಯ್ರಾವ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ರಾಧಿಕಾ ಪಂಡಿತ್. ಅಶೋಕ್, ತಬಲನಾಣಿ, ದತ್ತಣ್ಣ, ರವೀಂದ್ರನಾಥ್, ಶಾಂತಮ್ಮ , ಪವಿತ್ರಾಲೋಕೇಶ್, ಕಲ್ಯಾಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.