ಸ್ಯಾಂಡಲ್ವುಡ್ ಕೃಷ್ಣ, ಅಜಯ್ ರಾವ್ ಚೊಚ್ಚಲ ನಿರ್ಮಾಣದ ಶ್ರೀ ಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಬಚ್ಚನ್ ನಂತರ, ಶಶಾಂಕ್ ನಿರ್ದೇಶಿಸುತ್ತಿರುವ ಅದ್ದೂರಿ ಚಿತ್ರ ಕೃಷ್ಣ-ಲೀಲಾ ಚಿತ್ರದ ೨೫ ದಿನಗಳ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಹಂತದಲ್ಲಿ ನಾಯಕ ಅಜಯ್ರಾವ್, ನಾಯಕಿ ಮಯೂರಿ, ರಂಗಾಯಣ ರಘು, ಅಚ್ಯುತ್ಕುಮಾರ್, ತಬಲಾನಾಣಿ ಮುಂತಾದ ಕಲಾವಿದರು ಅಭಿನಯಿಸಿದ ದೃಶ್ಯಗಳನ್ನು ಬೆಂಗಳೂರಿನ ಸುತ್ತ ಮುತ್ತಲಿನ ಹಲವಾರು ವಿಭಿನ್ನ ಸ್ಥಳಗಳಲ್ಲಿ ಹಾಗು ಅದ್ದೂರಿ ಸೆಟ್ಗಳಲ್ಲಿ ಚಿತ್ರೀಕರಿಸಲಾಗಿದೆ.
ಚಿತ್ರೀಕರಣದ ಸ್ಥಳದಲ್ಲಿಯೇ ಆನ್ಲೈನ್ ಎಡಿಟಿಂಗ್ ನಡೆಯುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಿದ್ದು, ಚಿತ್ರೀಕರಣದ ಜೊತೆಗೆ ಚಿತ್ರದ ಸಂಕಲನ ಕಾರ್ಯ ಕೂಡ ಮುಕ್ತಾಯಗೊಂಡಿದೆ. ನವೀನ್ರಾಜ್ ಆನ್ಲೈನ್ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಚಿತ್ರಕ್ಕೆ ವಿ.ಶ್ರೀಧರ್ ಸಂಗೀತ ಹಾಗು ಶೇಖರ್ಚಂದ್ರ ಛಾಯಾಗ್ರಹಣವಿದೆ. ಎರಡನೇ ಹಂತದ ಚಿತ್ರೀಕರಣ ಜೂನ್ ಎರಡನೇ ವಾರದಲ್ಲಿ ಆರಂಭಗೊಳ್ಳಲಿದೆ.