ಚನ್ನಪಟ್ಟಣದಲ್ಲಿ `ಬ್ರಹ್ಮ`
Posted date: 07 Wed, Aug 2013 – 04:02:01 PM

 ಮೈಲಾರಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಮಂಜುನಾಥ ಬಾಬು(ಅಮೃತಹಳ್ಳಿ) ನಿರ್ಮಿಸುತ್ತಿರುವ ‘ಬ್ರಹ್ಮ ಚಿತ್ರಕ್ಕೆ
ಚನ್ನಪಟ್ಟಣದಲ್ಲಿ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ನಾಜರ್, ಸಿದ್ದರಾಜ್ ಕಲ್ಯಾಣ್‌ಕರ್, ಸಾಹಸ ಕಲಾವಿದರು ಹಾಗೂ ೧೫೦ಕ್ಕೂ ಹೆಚ್ಚು ಸಹಕಲಾವಿದರು ಅಭಿನಯಿಸಿದ ಈ ಸನ್ನಿವೇಶಕ್ಕೆ ಮಾಸ್‌ಮಾದ ಸಾಹಸ ನಿರ್ದೇಶನ ಮಾಡಿದ್ದಾರೆ.  
    ಆರ್.ಚಂದ್ರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ.  ಪ್ರಣೀತಾ, ರಂಗಾಯಣರಘು, ಸಾಧುಕೋಕಿಲ, ಶಯ್ಯಾಜಿ ಶಿಂಧೆ, ನಾಜರ್, ರಾಹುಲ್‌ದೇವ್, ಸೋನು ಸೂಧ್,ಸುಭಾಷ್ ಶೆಟ್ಟಿ, ಸಿದ್ದರಾಜ್ ಕಲ್ಯಾಣ್‌ಕರ್, ಗಿರೀಶ್ ಕಾರ್ನಾಡ್, ಕಾಟ್ ರಾಜು, ಬುಲೆಟ್ ಪ್ರಕಾಶ್, ಜಾನ್ ಕೊಕೇನ್, ಮಂಗಳೂರು ಸುರೇಶ್, ಲಕ್ಷ್ಮಣ್, ಶರಣ್, ಪದ್ಮಜಾರಾವ್, ಸುಚೇಂದ್ರಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
     ಶೇಖರ್ ಚಂದ್ರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್, ಇಸ್ಮಾಯಿಲ್ ಕಲಾ ನಿರ್ದೇಶನ, ಥ್ರಿಲ್ಲರ್ ಮಂಜು, ವಿಜಯ್ ಸಾಹಸ ನಿರ್ದೇಶನ ಹಾಗೂ ಪ್ರದೀಪ್ ಆಂಟೋನಿ ಅವರ ನೃತ್ಯ ನಿರ್ದೇಶನ ‘ಬ್ರಹ್ಮ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed