ನಾಳೆಯಿಂದ `ಮಳೆ`
Posted date: 06 Thu, Aug 2015 – 10:22:06 AM

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್,ಚಂದ್ರು ಅವರು ನಿರ್ಮಿಸಿರುವ ‘ಮಳೆ’ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಖ್ಯಾತ ನಿರ್ದೇಶಕ ಆರ್.ಚಂದ್ರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ಶಿವತೇಜಸ್ ನಿರ್ದೇಶಿಸಿದ್ದಾರೆ. ಚಂದ್ರು ಅವರ ಬಳಿ ಸಹಾಯಕರಾಗಿದ್ದ ಅನುಭವ ಶಿವತೇಜಸ್ ಅವರಿಗಿದೆ.
ಪ್ರೇಂ(ನೆನಪಿರಲಿ) ಅವರು ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅಮೂಲ್ಯ. ಸಾಧುಕೋಕಿಲ, ಬುಲೆಟ್ ಪ್ರಕಾಶ್, ನಾಗೇಂದ್ರ ಶಾ, ಗೌತಮಿ, ಸಂಗೀತ, ನೀನಾಸಂ ಸಿದ್ದಾರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸುಜ್ಞಾನ್ ಛಾಯಾಗ್ರಹಣ, ಜೆಸ್ಸಿಗಿಫ಼್ಟ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ, ಮುರಳಿ, ಹರ್ಷ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ರವಿವರ್ಮ ಸಾಹಸ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾನಿರ್ದೇಶನ ಹಾಗೂ ಸುಧೀಂದ್ರ ಹೊಸಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಕೆ.ಮುನೀಂದ್ರಪುರ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed