ಕರಿಸುಬ್ಬು ಹಾಗೂ ಎಂ.ಎನ್.ಕುಮಾರ್ ಅರ್ಪಿಸುವ, ಯೋಗರಾಜ್ ಮೂವೀಸ್ ಲಾಂಛನದಲ್ಲಿ ಯೋಗರಾಜ್ ಭಟ್ ಅವರು ನಿರ್ಮಿಸಿರುವ ‘ವಾಸ್ತು ಪ್ರಕಾರ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಯೋಗರಾಜ್ ಭಟ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಸುರೇಶ್ ಸಂಕಲನ, ಇಮ್ರಾನ್ ನೃತ್ಯ ನಿರ್ದೇಶನ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಜಗ್ಗೇಶ್, ರಕ್ಷಿತ್ ಶೆಟ್ಟಿ, ಪಾರೂಲ್ ಯಾದವ್, ಐಶಾನಿ ಶೆಟ್ಟಿ, ಅನಂತನಾಗ್, ಟಿ.ಎನ್.ಸೀತಾರಾಂ, ಸುಧಾರಾಣಿ, ಸುಧಾ ಬೆಳವಾಡಿ ಮುಂತಾದವರು ‘ವಾಸ್ತು ಪ್ರಕಾರ’ ಚಿತ್ರದ ತಾರಾಬಳಗದಲ್ಲಿದ್ದಾರೆ.