ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್,ಚಂದ್ರು ಅವರು ನಿರ್ಮಿಸುತ್ತಿರುವ ‘ಮಳೆ’ ಚಿತ್ರದ ಮೂರು ಹಾಡುಗಳ ಚಿತ್ರೀಕರಣ ಚಿಕ್ಕಮಗಳೂರು ಹಾಗೂ ಸಕಲೇಶಪುರದಲ್ಲಿ ನಡೆಯಲಿದೆ. ಪ್ರೇಮ್, ಅಮೂಲ್ಯ ಅಭಿನಯಿಸುವ ಈ ಹಾಡುಗಳಿಗೆ ಕಲೈ ಹಾಗೂ ಸ್ವರ್ಣ ನೃತ್ಯ ನಿರ್ದೇಶನ ಮಾಡಲಿದ್ದಾರೆ.
ಖ್ಯಾತ ನಿರ್ದೇಶಕ ಆರ್.ಚಂದ್ರು ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರವನ್ನು ತೇಜಸ್ ನಿರ್ದೇಶಿಸುತ್ತಿದ್ದಾರೆ. ಚಂದ್ರು ಅವರ ಬಳಿ ಸಹಾಯಕರಾಗಿದ್ದ ಅನುಭವ ತೇಜಸ್ ಅವರಿಗಿದೆ.
ಪ್ರೇಂ(ನೆನಪಿರಲಿ) ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಮೂಲ್ಯ. ಸುಜ್ಞಾನ್ ಛಾಯಾಗ್ರಹಣ, ಜೆಸ್ಸಿಗಿಫ಼್ಟ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ ಸಾಹಸ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಹಾಗೂ ಸುಧೀಂದ್ರ ಹೊಸಳ್ಳಿ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಕೆ.ಮುನೀಂದ್ರಪುರ.