ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ‘ಮಂಗನ ಕೈಲಿ ಮಾಣಿಕ್ಯ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ರಾಮಶ್ಯಾಮಭಾಮ, ಸತ್ಯವಾನ್ಸಾವಿತ್ರಿ, ಕಳ್ಮಂಜ ಮುಂತಾದ ಚಿತ್ರಗಳಿಗೆ ಸಂಭಾಷಣೆ ಬರೆದು ಖ್ಯಾತರಾಗಿರುವ ರಾಜೇಂದ್ರಕಾರಂತ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ.
ಚಿತ್ರಕ್ಕೆ ಬೆಂಗಳೂರು, ಮೈಸೂರಿನಲ್ಲಿ ಮೂವತ್ತು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ರಾಜೇಶ್ರಾಮನಾಥ್ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆಯುತ್ತಿದೆ.
ರಮೇಶ್ಅರವಿಂದ್, ರವಿಶಂಕರ್ಗೌಡ, ರಂಗಾಯಣರಘು, ಹರ್ಷಿಕಾಪೂಣಚ್ಛ, ಸೋನಿಯಾಗೌಡ, ಖುಷಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕರೇ ಕಥೆ, ಚಿತ್ರಕೆಥೆ, ಸಂಭಾಷಣೆ ಬರೆದು ಹಾಡುಗಳನ್ನು ರಚಿಸಿದ್ದಾರೆ. ಜೆ.ಜಿ.ಕೃಷ್ಣ ಚಾಯಾಗ್ರಹಣ, ರಾಜೇಶ್ರಾಮನಾಥ್ ಸಂಗೀತ, ನಾಗೇಂದ್ರಅರಸ್ ಸಂಕಲನ, ಇಮ್ರಾನ್ ಸರ್ದಾರಿಯಾ ನೃತ್ಯನಿರ್ದೇಶನ ಹಾಗೂ ಇಸ್ಮಾಯಿಲ್ ಕಲಾ ನಿರ್ದೇಶನ ‘ಮಂಗನ ಕೈಲಿ ಮಾಣಿಕ್ಯ ಚಿತ್ರಕ್ಕಿದೆ.