ರಾಘವೇಂದ್ರ ಚಿತ್ರವಾಣಿಯ 48ನೇ ವಾರ್ಷುಕೋತ್ಸವ ಹಾಗು 23 ನೇ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ಸಿನಿ ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಮತ್ತು ಅರ್ಥಪೂರ್ಣವಾಗಿ ನೆಡೆಯಿತು
ಹಿರಿಯ ಪತ್ರಕರ್ತೆ ಡಾ.ವಿಜಯಮ್ಮ, ಹಿರಿಯ ಕಲಾವಿದರಾದ ತಾರಾ ಅನುರಾಧ, ನಿರ್ಮಾಪಕಿ ಪೂರ್ಣಿಮಾ ರಾಮ್ ಕುಮಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್. ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮತ್ತಿತರು ಹಾಜರಿದ್ದರು
ಹಿರಿಯ ಚಲನಚಿತ್ರ ನಿರ್ಮಾಪಕರು ದಿವಂಗತ ರಾಮು ಅವರ ಪರವಾಗಿ ಹಿರಿಯ ನಟಿ ಮಾಲಾಶ್ರಿ ಅವರಿಗೆ ,ಹಿರಿಯ ಪತ್ರಕರ್ತ ಮುರಳಿಧರ ಖಜಾನೆ ಅವರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು
ಡಾ. ರಾಜ್ಕುಮಾರ್ ಕುಟುಂಬದ ವತಿಯಿಂದ ಕೊಡಮಾಡುವ ಡಾ. ರಾಜ್ ಕುಮಾರ್ ಪ್ರಶಸ್ತಿ ಹಿನ್ನೆಲೆ ಗಾಯಕ ಹೇಮಂತ್ ಕುಮಾರ್ ಅವರಿಗೆ ಹಾಗು ಭಾರತಿ ವಿಷ್ಣುವರ್ಧನ ಅವರಿಂದ ಯಜಮಾನ’ ಚಿತ್ರದ ಖ್ಯಾತಿ ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಖ್ಯಾತ ಅಭಿನೇತ್ರಿ ಜಯಮಾಲ ಎಚ್.ಎಂ.ರಾಮಚಂದ್ರ ಪ್ರಶಸ್ತಿ ಹಿರಿಯ ಕಲಾವಿದೆ ಜಯಲಕ್ಷ್ಮಿ ಅವರಿಗೆ ಹೊಂದಿಸಿ ಬರೆಯಿರಿ" ಚಿತ್ರಕ್ಕಾಗಿ ಎಂ.ಎಸ್.ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ ಪ್ರಶಸ್ತಿ ಅತ್ಯತ್ತಮ ಸಂಗೀತ ನಿರ್ದೇಶನ ಜೋ ಕೋಸ್ಟ ನೀಡಿ ಗೌರವಿಸಲಾಯಿತು.
ಕೆ.ವಿ. ಜಯರಾಂ ಪ್ರಶಸ್ತಿ -ಮೀನಾಕ್ಷಿ ಜಯರಾಂ ಅವರಿಂದ. ಕೊಡ ಮಾಡುವ ಸಪ್ತಸಾಗರದಾಚೆ ಎಲ್ಲೋ ಚಿತ್ರಕ್ಕಾಗಿ ನಿರ್ದೇಶಕ ಹೇಮಂತ್ ರಾವ್, ಸಾಹಿತಿ ಶ್ರೀಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ - ಡಾ. ಎಚ್.ಕೆ. ನರಹರಿ ಅವರಿಂದ ವಿರಾಟಪುರದ ವಿರಾಗಿ* ’ಚಿತ್ರಕ್ಕಾಗಿ ಅತ್ಯುತ್ತಮ ಸಂಭಾಷಣೆ ಬಿ.ಎಸ್. ಲಿಂಗದೇವರು ಹಾಗೂ ಶರಣು ಹುಲ್ಲೂರು ,ರಂಗ ತಜ್ಞ, ಹಿರಿತೆರೆ, ಕಿರುತೆರೆ ನಿರ್ದೇಶಕ ಬಿ.ಸುರೇಶ್ ಪ್ರಶಸ್ತಿ ಆಚಾರ್ ಅಂಡ್ ಕೋ’ - ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ ಕುಮಾರಿ ಸಿಂಧು ಶ್ರೀನಿವಾಸಮೂರ್ತಿ,ಹಿರಿಯ ಪತ್ರಕರ್ತ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಟಗರು ಪಲ್ಯ ಚಿತ್ರದ - ‘ಸಂಬಂಜ ಅನ್ನೋದು ದೊಡ್ಡದು ಕನಾ’ ಗೀತರಚನೆಗಾಗಿ ಡಾಲಿ ಧನಂಜಯ ಅವರಿಗೆ ಸಂಧಿದೆ..ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ ಹಿರಿಯ ಪೋಷಕ ಕಲಾವಿದ ಸುಂದರರಾಜ್ ಅವರನ್ನು ಸನ್ಮಾನಿಸಲಾಯಿತು
ಈ ವೇಳೆ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್, ಸುನೀಲ್ ಸುಧೀಂದ್ರ ಹಾಗು ಡಿಜಿ ವಾಸುದೇವ್ ಸೇರಿದಂತೆ ಕುಟುಂಬದ ಸದಸ್ಯರು ಹಾಜರಿದ್ದರು