‘ಮತ್ತೆ ಉದ್ಭವ’ ನಾಳೆಯಿಂದ ತೆರೆಗೆ
Posted date: 06 Thu, Feb 2020 – 09:04:32 AM

ವೈಟ್ ಪ್ಯಾಂಥರ‍್ಸ್ ಕ್ರಿಯೇಟರ್ಸ್ ಸಂಸ್ಥೆಯವರು ನಿರ್ಮಿಸಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಮತ್ತೆ ಉದ್ಭವ‘ ಚಿತ್ರ ನಾಳೆಯಿಂದ  ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ವಿ.ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಅವರ ಛಾಯಾಗ್ರಹಣವಿದೆ. ಎಸ್.ಮೋಹನ್ ಸಂಭಾಷಣೆ ಬರೆದಿದ್ದಾರೆ. ವಸಂತ್‌ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಗುರುಪ್ರಸಾದ್ ಮುದ್ರಾಡಿ.

‘ಪ್ರಿಮಿಯರ್ ಪದ್ಮಿನಿ‘ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ.ಡಿ.ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed