`ಐ.ಪಿ.ಸಿ ಸೆಕ್ಷನ್ ೩೦೦ ಆರಂಭ
Posted date: 22/April/2009

ಶ್ರೀಚೌಡೇಶ್ವರಿ ಪ್ರಸನ್ನ ಮೂವೀಸ್ ಲಾಂಛನದಲ್ಲಿ ‘ಹುಬ್ಬಳ್ಳಿ, ‘ಮಂಡ್ಯ, ‘ತುಂಟ, ‘ಈಶ್ವರ್ ಸೇರಿದಂತೆ ಇತ್ತೀಚೆಗೆ ತೆರೆಕಂಡ ‘ಯಜ಼್ಞ ಚಿತ್ರವನ್ನು ನಿರ್ಮಿಸಿದ ನಿರ್ಮಾಪಕ ಆರ್.ಶಂಕರ್ ಪ್ರಸ್ತುತ ‘ಐ.ಪಿ.ಸಿ ಸೆಕ್ಷನ್ ೩೦೦ ಶೀರ್ಷಿಕೆಯ ಚಿತ್ರವನ್ನು ಆರಂಭಿಸಿದ್ದಾರೆ.
     ಹಲವು ಕಿರುಚಿತ್ರಗಳನ್ನು ನಿರ್ಮಿಸಿ ಅನುಭವವಿರುವ ಶಶಿಕಾಂತ್ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ. ವಿಜಯರಾಘವೇಂದ್ರ ಚಿತ್ರದ ನಾಯಕರಾಗಿದ್ದು ಬೆಡಗಿ ಪ್ರಿಯಾಂಕ ನಾಯಕಿಯಾಗಿ ನಟಿಸುತ್ತಿದ್ದಾರೆ. ಖ್ಯಾತ ನಟ ದೇವರಾಜ್ ಹಾಗೂ ಚೆಲುವೆ ಸುಮನ್ ರಂಗನಾಥ್ ಈ ಚಿತ್ರದಲ್ಲಿ ಗಮನಾರ್ಹ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಶಂಕರ್, ಮುನಿ, ರವೀಂದ್ರನಾಥ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
     ಪ್ರಸ್ತುತ ಚಿತ್ರಕ್ಕೆ ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಚಿತ್ರದಲ್ಲಿ ಗಂಡ-ಹೆಂಡತಿಯಾಗಿ ಕಾಣಿಸಿಕೊಳ್ಳುತ್ತಿರುವ ದೇವರಾಜ್ ಹಾಗೂ ಸುಮನ್ ರಂಗನಾಥ್ ಅಭಿನಯದಲ್ಲಿ ಕೆಲವು ಸನ್ನಿವೇಶಗಳ ಚಿತ್ರೀಕರಣವನ್ನು ಜಕ್ಕೂರು ಬಳಿಯಿರುವ ಕಾಮತ್ ಹೌಸ್‌ನಲ್ಲಿ ನಡೆಸಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
      ಶಶಿಕಾಂತ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವೀರಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ, ನಿರಂಜನ್ ಬಾಬು ಛಾಯಾಗ್ರಹಣ, ಈಶ್ವರ್ ಸಂಕಲನ, ಬಾಬು ಖಾನ್ ಕಲೆ, ಅರುಣ್ ಕುಮಾರ್ ಸಹ ನಿರ್ದೇಶನ, ಅಚ್ಯುತ್ ರಾವ್ ನಿರ್ಮಾಣ ನಿರ್ವಹಣೆ, ಹಾಗೂ ಎಚ್.ನರಸಿಂಹ(ಜಾಲಹಳ್ಳಿ) ನಿರ್ಮಾಣ ಮೇಲ್ವಿಚಾರಣೆ ‘ಐ.ಪಿ.ಸಿ ಸೆಕ್ಷನ್ ೩೦೦ ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed