ಶ್ರೀಚೌಡೇಶ್ವರಿ ಪ್ರಸನ್ನ ಮೂವೀಸ್ ಲಾಂಛನದಲ್ಲಿ ‘ಹುಬ್ಬಳ್ಳಿ, ‘ಮಂಡ್ಯ, ‘ತುಂಟ, ‘ಈಶ್ವರ್ ಸೇರಿದಂತೆ ಇತ್ತೀಚೆಗೆ ತೆರೆಕಂಡ ‘ಯಜ಼್ಞ ಚಿತ್ರವನ್ನು ನಿರ್ಮಿಸಿದ ನಿರ್ಮಾಪಕ ಆರ್.ಶಂಕರ್ ಪ್ರಸ್ತುತ ‘ಐ.ಪಿ.ಸಿ ಸೆಕ್ಷನ್ ೩೦೦ ಶೀರ್ಷಿಕೆಯ ಚಿತ್ರವನ್ನು ಆರಂಭಿಸಿದ್ದಾರೆ.
ಹಲವು ಕಿರುಚಿತ್ರಗಳನ್ನು ನಿರ್ಮಿಸಿ ಅನುಭವವಿರುವ ಶಶಿಕಾಂತ್ ಈ ಚಿತ್ರವನ್ನು ನಿರ್ದೇಶಿಸುವ ಮೂಲಕ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ. ವಿಜಯರಾಘವೇಂದ್ರ ಚಿತ್ರದ ನಾಯಕರಾಗಿದ್ದು ಬೆಡಗಿ ಪ್ರಿಯಾಂಕ ನಾಯಕಿಯಾಗಿ ನಟಿಸುತ್ತಿದ್ದಾರೆ. ಖ್ಯಾತ ನಟ ದೇವರಾಜ್ ಹಾಗೂ ಚೆಲುವೆ ಸುಮನ್ ರಂಗನಾಥ್ ಈ ಚಿತ್ರದಲ್ಲಿ ಗಮನಾರ್ಹ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಶಂಕರ್, ಮುನಿ, ರವೀಂದ್ರನಾಥ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಸ್ತುತ ಚಿತ್ರಕ್ಕೆ ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಚಿತ್ರದಲ್ಲಿ ಗಂಡ-ಹೆಂಡತಿಯಾಗಿ ಕಾಣಿಸಿಕೊಳ್ಳುತ್ತಿರುವ ದೇವರಾಜ್ ಹಾಗೂ ಸುಮನ್ ರಂಗನಾಥ್ ಅಭಿನಯದಲ್ಲಿ ಕೆಲವು ಸನ್ನಿವೇಶಗಳ ಚಿತ್ರೀಕರಣವನ್ನು ಜಕ್ಕೂರು ಬಳಿಯಿರುವ ಕಾಮತ್ ಹೌಸ್ನಲ್ಲಿ ನಡೆಸಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಶಶಿಕಾಂತ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವೀರಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ, ನಿರಂಜನ್ ಬಾಬು ಛಾಯಾಗ್ರಹಣ, ಈಶ್ವರ್ ಸಂಕಲನ, ಬಾಬು ಖಾನ್ ಕಲೆ, ಅರುಣ್ ಕುಮಾರ್ ಸಹ ನಿರ್ದೇಶನ, ಅಚ್ಯುತ್ ರಾವ್ ನಿರ್ಮಾಣ ನಿರ್ವಹಣೆ, ಹಾಗೂ ಎಚ್.ನರಸಿಂಹ(ಜಾಲಹಳ್ಳಿ) ನಿರ್ಮಾಣ ಮೇಲ್ವಿಚಾರಣೆ ‘ಐ.ಪಿ.ಸಿ ಸೆಕ್ಷನ್ ೩೦೦ ಚಿತ್ರಕ್ಕಿದೆ.