ಕೆ.ಕೆ.ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಶಿವರಾಜಕುಮಾರ್ ಅಭಿನಯದ `ನಂದ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿರ್ಮಾಪಕ ಮಾಹಿನ್ ಚಿತ್ರದ ಕತೆಗಾರರೂ ಕೂಡ. ಮಾಹಿನ್ ಅವರ ಜೀವನದಲ್ಲಿ ನಡೆದ ನೈಜಕತೆಗೆ ನಿರ್ದೇಶಕ ಅನಂತರಾಜು ಚಿತ್ರಕತೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಅಶ್ವಿನಿ ಆಡೀಯೋ ಮೂಲಕ ಹಾಡಾಗಿ ಬಂದಿರುವ `ನಂದ`ನಿಗೆ ಮಾರುಕಟ್ಟೆಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸ್ವದೇಶದಲ್ಲಲ್ಲದೆ ವಿದೇಶದಲ್ಲೂ ಚಿತ್ರೀಕರಣವಾಗಿರುವ ಈ ಚಿತ್ರದಲ್ಲಿ ಶಿವರಾಜಕುಮಾರ್ ನಾಯಕನ ಪಾತ್ರ ನಿರ್ವಹಿಸಿದರೆ `ಕಾದಲ್` ಖ್ಯಾತಿಯ ಸಂಧ್ಯಾ ಹಾಗೂ ಮೈತ್ರೇಯಿ `ನಂದ`ನ ನಾಯಕಿಯರಾಗಿದ್ದಾರೆ. ನಿರ್ಮಾಪಕ ಮಾಹಿನ್ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ
ರಮೇಶ್ಬಾಬು ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿ.ಮನೋಹರ್ ಅವರ ಸಂಗೀತವಿದೆ, ಎಸ್.ಮನೋಹರ್ ಸಂಕಲನ, ಮಾಹಿನ್ ಕತೆ, ಪಳನಿರಾಜ್ ಸಾಹಸ, ಇಸ್ಮಾಯಿಲ್ ಕಲೆ ಹಾಗೂ ರಾಮು, ಗಂಡಸಿ ನಾಗರಾಜ್ ನಿರ್ಮಾಣನಿರ್ವಹಣೆಯಿರುವ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಸಂಧ್ಯಾ, ಮೈತ್ರೇಯಿ, ಶರಣ್, ಮಿಥನ್ತೇಜಸ್ವಿ, ಮಾಹಿನ್, ಜ್ಯೋತಿ, ಶ್ರೀನಾಥ್ ಮುಂತಾದವರಿದ್ದಾರೆ.