ಕ್ರಿ.ಶ 1508 ರಿಂದ 2018 ರ ವರೆಗಿನ ನಾಲ್ಕು ತಲೆಮಾರಿನ ಕತೆ ಹೊಂದಿರುವ ಸಿನಿಮಾ ಸುವರ್ಣ ಸುಂದರಿ ನಾಳೆಯಿಂದ ತೆರೆಗೆ ಬರುತ್ತಿದೆ. ಶ್ರೀ ಕೃಷ್ಣದೇವರಾಯರ ಅವಧಿಯಲ್ಲಿ ರಾಜಾ ಮಹಾದೇವರೆಡ್ಡಿ ಸಾಮ್ರಾಜ್ಯದಲ್ಲಿ ನಡೆದ ಘಟನೆಗಳನ್ನು ಈ ಚಿತ್ರದ ಸನ್ನಿವೇಶಗಳಿಗೆ ವಿಶೇಷವಾಗಿ ಬಳಸಲಾಗಿದೆ. ಮೈ ನವಿರೇಳಿಸುವ ರೋಚಕ ಸ್ಟಂಟ್ಸ್ಗಳು ಈ ಚಿತ್ರದಲ್ಲಿರಲಿವೆ. ಸುವರ್ಣ ಸುಂದರಿಗಾಗಿ ಕೇರಳ, ಹೈದರಾಬಾದ್, ಬೀದರ್, ವಿಧಾನಸೌಧ ರಸ್ತೆ, ನೈಸ್ ರೋಡ್ಗಳಲ್ಲಿ ೯೦ ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕತೆಗೆ ಪೂರಕವಾಗಿ ೫೦ ನಿಮಿಷ ಗ್ರಾಫಿಕ್ಸ್ ಬಳಸಲಾಗಿದೆ. ನಾಯಕಿಯಾಗಿ ಡೆಹರಾಡೂನ್ ಮೂಲದ ಸಾಕ್ಷಿ ಎರಡು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾರಂಭದ ಅವಧಿಯಲ್ಲಿ ಸಾಯಿಕುಮಾರ್ ಪಾತ್ರವಿರುತ್ತದೆ. ಹಾಗೆಯೇ ೧೯೬೦ರ ಕಲೆಕ್ಟರ್ ಪಾತ್ರದಲ್ಲಿ ತಿಲಕ್ ನಟಿಸಿದ್ದಾರೆ. ಮತ್ತೊಬ್ಬ ನಾಯಕಿ ಪೂರ್ಣ ಮತ್ತು ಜಯಪ್ರದಾ ಪಾತ್ರದ ವಿವರವನ್ನು ಚಿತ್ರತಂಡ ಇನ್ನೂ ಜಾಹೀರು ಮಾಡಿಲ್ಲ. ಈ ಚಿತ್ರದಲ್ಲಿರುವ ಎರಡು ಹಾಡುಗಳಿಗೆ ಸಾಯಿಕಾರ್ತಿಕ್ ಸಂಗೀತ ಸಂಯೋಜಿಸಿದ್ದಾರೆ.
ಇತಿಹಾಸ ವಿಷಯದಲ್ಲಿ ಪದವಿ ಪಡೆದುಕೊಂಡಿರುವ ಎಂ.ಎಸ್.ಎನ್.ಸೂರ್ಯ ಕತೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಅವರ ಸಹೋದರಿ ನಿರ್ಮಾಪಕಿಯಾಗಿದ್ದಾರೆ. ಹೆಸರಾಂತ ಕಲಾವಿದರುಗಳಾದ ಡಾ ಜಯಪ್ರದಾ, ಸಾಯಿಕುಮಾರ್, ಸಾಕ್ಷಿ, ಪೂರ್ಣ, ತಿಲಕ್, ಅವಿನಾಶ್, ಜೈ ಜಗದೀಶ್, ಕುಕ್ಥರ್ ಖಾನ್, ಶಾನ್ ಹಾಗೂ ಇತರರು ಚಿತ್ರದಲ್ಲಿದ್ದಾರೆ. ನಿರ್ದೇಶಕ ಎಂ ಎಸ್ ಎನ್ ಸೂರ್ಯ ಅವರ ಸಹೋದರಿ ಎಂ ಎನ್ ಲಕ್ಷ್ಮಿ ಈ ಚಿತ್ರದ ನಿರ್ಮಾಪಕಿ. ಸಾಯಿ ಕಾರ್ತಿಕ್ ಸಂಗೀತ ಹಾಗೂ ರೀ ರೆಕಾರ್ಡಿಂಗ್ ಮಾಡಿದ್ದಾರೆ. ರಾಮ್ ಸುಂಕರ್ ಚಿತ್ರಕ್ಕೆ ಸಾಹಸ ಒದಗಿಸಿದ್ದಾರೆ. ಇದು ಎಸ್ ಟೀಮ್ ಪಿಕ್ಚರ್ ನಿರ್ಮಾಣ. ವೈ, ಈಶ್ವರ್ ಈ ಚಿತ್ರಕ್ಕೆ ಛಾಯಾಗ್ರಹಣ ಒದಗಿಸಿದ್ದಾರೆ.