ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನೀಲ್ ಪುರಾಣಿಕ್ ರವರು ಇಂದು ಬೆಳಗ್ಗೆ ಬೆಂಗಳೂರಿನ ವಿಜಯನಗರ ಶಾಖಾ ಮಠದಲ್ಲಿ ಭೇಟಿಯಾಗಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಯಶಸ್ವಿಯಾಗಲು ಆಶೀರ್ವಾದ ಕೋರಿದರು.ಶ್ರೀಗಳು ಸುನೀಲ್ ಪುರಾಣಿಕ್ ಅವರ ಅವಧಿಯಲ್ಲಿ ಸರ್ಕಾರದ ವತಿಯಿಂದ ಕನ್ನಡ ಚಲನಚಿತ್ರೋದ್ಯಮಕ್ಕೆ ಗರಿಷ್ಠ ಮಟ್ಟದ ಕೆಲಸಗಳಾಗಲಿ ಎಂದು ಹಾರೈಸಿದರು.ಈ ಸಂಧರ್ಭದಲ್ಲಿ ನಟ/ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಜೊತೆಯಲ್ಲಿದ್ದರು