ರೆಬೆಲ್ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಾಯಕರಾಗಿ ನಟಿಸಿರುವ ’ಅಮರ್’ ಚಿತ್ರ ನಾಳೆಯಿಂದ ರಾಜ್ಯಾದ್ಯಾಂತ ಬಿಡುಗಡೆಯಾಗುತ್ತಿದೆ.
ಸಂದೇಶ್ ಕಂಬೈನ್ಸ್ ಮೂಲಕ ಸಂದೇಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಹಿಂದೆ ಅಂಬರೀಶ್ ಅವರ ಅಭಿನಯಿಸಿದ ಸಾಕಷ್ಟು ಚಿತ್ರಗಳನ್ನು ಸಂದೇಶ್ ನಾಗರಾಜ್ ನಿರ್ಮಿಸಿದ್ದಾರೆ.
ಬೆಂಗಳೂರು, ಮೈಸೂರು, ಮಡಿಕೇರಿ, ಮಂಗಳೂರು, ಮಣಿಪಾಲ, ಊಟಿ, ಕೇರಳ, ಕೊಯಮತ್ತೂರು, ಹಾಗೂ ಸಿಂಗಾಪುರ, ಸ್ವಿಜರ್ ಲ್ಯಾಂಡ್ನಲ್ಲೂ ಚಿತ್ರದ ಚಿತ್ರೀಕರಣವಾಗಿದೆ. ಅತಿಹೆಚ್ಚು ಲೊಕೇಶನ್ಗಳಲ್ಲಿ ಚಿತ್ರೀಕರಣಗೊಂಡಿರುವ ಚಿತ್ರ ಎಂಬ ಹೆಗ್ಗಳಿಕೆ ಪಡೆದಿದೆ.
ನಾಗಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಸತ್ಯ ಹೆಗಡೆ ಛಾಯಾಗ್ರಹಣ, ಹರ್ಷ ಸಂಕಲನ, ಧನಂಜಯ್, ಇಮ್ರಾನ್, ಕಲೈ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಥ್ರಿಲ್ಲರ್ ಮಂಜು, ಅಂಬು ಅರಿವು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅಭಿಷೇಕ್ ಅಂಬರೀಶ್, ತಾನ್ಯಾ ಹೋಪ್, ಸುಧಾರಾಣಿ, ದೇವರಾಜ್, ದೀಪಕ್ ಶೆಟ್ಟಿ, ಅರುಣ್ ಸಾಗರ್, ಚಿಕ್ಕಣ್ಣ, ಸಾಧುಕೋಕಿಲ, ನಿರೂಪ್ ಭಂಡಾರಿ ಮುಂತಾದವರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಶೇಷ ಪಾತ್ರದಲ್ಲಿ ಈ ಚಿತ್ರದಲ್ಲಿ ನಟಿಸಿದ್ದಾರೆ.
.