ಸ್ಯಾಮಿ ಅಸೋಸಿಯೋಟ್ಸ್ ಲಾಂಛನದಲ್ಲಿ ಟಿ.ಪಿ.ಸಿದ್ದರಾಜು ನಿರ್ಮಿಸಿರುವ ‘ಸಿದ್ಲಿಂಗು ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಜಯಪ್ರಸಾದ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಯೋಗೀಶ್ ಅಭಿನಯಿಸಿದ್ದಾರೆ. ರಮ್ಯಾ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸುಮನ್ ರಂಗನಾಥ್, ಅಚ್ಯುತರಾವ್, ಗಿರಿಜಾಲೋಕೇಶ್, ರೇಣುಕಾರಾಧ್ಯ, ರಂಗಾಯಣರಘು, ಶರಣ್, ಎಚ್.ಎಮ್.ಟಿ ವಿಜಯ್, ಕೆ.ಸಿ.ಶ್ರೀಧರ್, ವತ್ಸಲಾ ಮೋಹನ್ ಮುಂತಾದವರಿದ್ದಾರೆ. ಜ಼್ಞಾನಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಡಿಫ಼ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಉದಯ ಹೆಗಡೆ ಸಂಕಲನ ‘ಸಿದ್ಲಿಂಗು ಚಿತ್ರಕ್ಕಿದೆ.