ಶ್ರೀ ಸಿದ್ಧವಿನಾಯಕ ಫಿಲಂಸ್ ಲಾಂಛನದಲ್ಲಿ, ಟಿ.ನಾಗಚಂದ್ರ, ಸ್ನೇಹಿತರೊಂದಿಗೆ ಕೂಡಿ ನಿರ್ಮಿಸುತ್ತಿರುವ ಜನ್ಧನ್ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯು/ಎ ಸರ್ಟಿಫಿಕೆಟ್ ಪಡೆದ ಈ ಚಿತ್ರ ಈ ವಆರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರ ಬೆಂಗಳೂರಿನಿಂದ-ಶಿರಾವರೆಗೂ ನಡೆಯುವ ಒಂದು ದಿನದ ಕಥೆಯಾಗಿದ್ದು, ಎನ್ಹೆಚ್ 4 ನಲ್ಲಿ ಬೆಳಿಗ್ಗೆ 4 ಗಂಟೆಯಿಂದ ಪ್ರಾರಂಭವಾದರೆ ಸಂಜೆಯವರೆಗೆ ಕೊನೆಗೊಳ್ಳುತ್ತದೆ, ಸಾಮಾನ್ಯ ಜನರ ಭಾವನೆಗಳನ್ನು ಬಿತ್ತರಿಸುವ ಕಥೆ ಇದು. ಈ ಚಿತ್ರವನ್ನು ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಟಿ.ನಾಗಚಂದ್ರ, ಛಾಯಾಗ್ರಹಣ-ಉಮೇಶ್ ಕಂಪ್ಲಾಪುರ್, ಸಂಗೀತ - ಟಾಪ್ ಸ್ಟಾರ್ ರೇಣು, ಹಿನ್ನೆಲೆ ಸಂಗೀತ - ಗೌತಮ್ ಶ್ರೀವತ್ಸ, ನಿರ್ವಹಣೆ- ರಾಜರಾವ್, ತಾರಾಗಣದಲ್ಲಿ - ಸುನೀಲ್ ಶಶಿ, ರಚನಾ, ಮಾ|| ಲಕ್ಷಣ್, ಅರುಣ್, ಟಾಪ್ಸ್ಟಾರ್ ರೇಣು, ಜಯಲಕ್ಷ್ಮಿ, ಸುನಿಲ್ ವಿನಾಯಕ, ಸುಮನ್, ತೇಜೇಶ್ವರ್ ಮುಂತಾದವರಿದ್ದಾರೆ.