ಹೀರಾಲಾಲ್ ಮೂವೀಸ್ ಲಾಂಛನದಲ್ಲಿ ಚಂದ್ರಕಲಾ ಟಿ.ಆರ್. ಹಾಗೂ ಮಂಜುನಾಥ್ ನಾಯಕ್ ನಿರ್ಮಿಸುತ್ತಿರುವ ಬೆಟ್ಟದ ದಾರಿ ಚಿತ್ರಕ್ಕೆ ಇತ್ತೀಚೆಗೆ ರೇಣುಕಾಂಭ ಸ್ಟುಡಿಯೋದಲ್ಲಿ ಮಾತುಗಳ ಧ್ವನಿಮುದ್ರಣ ಕಾರ್ಯ ಮುಕ್ತಾಯಗೊಂಡಿದೆ. ಸರ್ಕಾರದಿಂದಲೂ ಬಗೆಹರಿಸಲು ಸಾಧ್ಯವೇ ಇಲ್ಲ ಎನ್ನುವಂತಾ ನೀರಿನ ಸಮಸ್ಯೆಯನ್ನು ಐವರು ಹುಡುಗರು ಹೇಗೆ ಪರಿಹರಿಸುತ್ತಾರೆ ಅನ್ನೋ ಪ್ರಧಾನ ಎಳೆ ಈ ಚಿತ್ರದ್ದು. ಬಂಗಾರಿ ಮತ್ತು ಶಿವನ ಪಾದ ಸಿನಿಮಾಗಳನ್ನು ನಿರ್ದೇಶಿಸಿರುವ ಮಾ. ಚಂದ್ರು ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ನಂದಕುಮಾರ್ ಛಾಯಾಗ್ರಹಣ, ವೀರ್ ಸಮರ್ಥ್ ಸಂಗೀತ, ಅರ್ಜುನ್ (ಕಿಟ್ಟಿ) ಸಂಕಲನ, ಡಾ. ವಿ. ನಾಗೇಂದ್ರ ಪ್ರಸಾದ್, ಕೆ. ಕಲ್ಯಾಣ್ ಹಾಗೂ ವಿಜಯ್ ಭರಮಸಾಗರ ಸಾಹಿತ್ಯವಿದೆ. ಮಾ. ನಿಶಾಂತ್ ಟಿ. ರಾಥೋಡ್, ಮಾ. ರಂಗನಾಥ್ ಯಾದವ್, ಮಾ. ರೋಹಿತ್, ಮಾ. ವಿಘ್ನೇಶ್, ಬೇಬಿ ಮಾನ್ಯತಾ ಎಂ. ನಾಯಕ್, ಮನದೀಪ್ ರಾಯ್, ರಮೇಶ್ ಭಟ್, ಉಮೇಶ್, ಮೈಸೂರು ಮಲ್ಲೇಶ್, ಆರ್. ನಾಗೇಶ್, ರಿಕ್ಕಿ, ಅಂಜಲಿ, ಮಂಜುಳಾ ರೆಡ್ಡಿ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.