ಬಂಡೆಮಹಾಕಾಳಿ ದೇವಸ್ಥಾನದಲ್ಲಿ`ವೃಷಂಗ` ಚಿತ್ರಕ್ಕೆ ಚಾಲನೆ
Posted date: 26 Tue, Nov 2019 – 09:38:45 AM

ಫ಼್ರೆಂಡ್ಸ್ ಪಿಕ್ಚರ್ಸ್ ಕ್ರಿಯೇಷನ್ಸ್ ಲಾಂಛನದಲ್ಲಿ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಮತ್ತು ಕುಮಾರಿ ಸಂಗೀತ ಎಸ್.ಆರ್ ಅವರು ನಿರ್ಮಿಸುತ್ತಿರುವ ‘ವೃಷಂಗ‘ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಆರಂಭ ಫಲಕ ತೋರಿದರು. ರಂಗನಾಥ್ ಎಸ್.ಆರ್ ಕ್ಯಾಮೆರಾ ಚಾಲನೆ ಮಾಡಿದರು.

‘ರಮಣ ರಮಣಿ‘ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅನುಭವವಿರುವ ನಿರಂಜನ್ ರಂಗನಾಥ್ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮುತ್ತುರಾಜ್ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ಪ್ರಧಾನ ನಿರ್ದೇಶನದ ಹೊಣೆ ಹೊತ್ತಿದ್ದಾರೆ.  

ಹೆಣ್ಣಿನ ಶೋಷಣೆಯ ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಆರು ಹಾಡುಗಳಿರುವ ಈ ಚಿತ್ರಕ್ಕೆ ಸರ್ವೇಶ್ ಜೈನ್ ಸಂಗೀತ ನೀಡುತ್ತಿದ್ದಾರೆ. ನಾಲ್ಕು ಸಾಹಸ ಸನ್ನಿವೇಶಗಳಿದ್ದು, ವೈಲೆಂಟ್ ವೇಲು ಸಾಹಸ ನಿರ್ದೇಶನ ಮಾಡಲಿದ್ದಾರೆ. ಯೇಸುದಾಸ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ನಾಯಕರಾಗಿ ಹೇಮಂತ್ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಮಾನಸ, ಪೂಜ, ಚೇತನ್, ಆನಂದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed