ಗೌರಮ್ಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎ.ಸುರೇಶ್ ನಿರ್ಮಿಸುತ್ತಿರುವ ‘ಮಂಜುನಾಥ ಬಿ.ಎ.ಎಲ್.ಎಲ್.ಬಿ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.
ಜಗ್ಗೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಮೋಹನ್ ನಿರ್ದೇಶಿಸುತ್ತಿದ್ದಾರೆ. ಸಂಭಾಷಣೆಯನ್ನು ಮೋಹನ್ ಅವರೇ ಬರೆದಿದ್ದಾರೆ. ರೀಮಾವೊರಾ ನಾಯಕಿಯಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಕರಿಬಸವಯ್ಯ, ಸ್ವಸ್ತಿಕ್ ಶಂಕರ್, ಗಿರಿಜಾ ಲೋಕೇಶ್, ಶಂಕರ್ ಪಾಟೀಲ್, ರಾಣಿ ಮುಂತಾದವರಿದ್ದಾರೆ. ವಿನಯ್ಚಂದ್ರ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಅಶೋಕ್ ಅವರ ಛಾಯಾಗ್ರಹಣವಿದೆ. ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಬಾಬುಖಾನ್ ಕಲಾ ನಿರ್ದೇಶನವಿರುವ ‘ಮಂಜುನಾಥ ಬಿ.ಎ.ಎಲ್.ಎಲ್.ಬಿ ಚಿತ್ರಕ್ಕೆ ರವಿಶಂಕರ್ ಅವರ ನಿರ್ಮಾಣ ನಿರ್ವಹಣೆಯಿದೆ.