ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ `ಬಡವ ರಾಸ್ಕಲ್` ಚಿತ್ರಕ್ಕೆ ಮುಹೂರ್ತ
Posted date: 03 Tue, Sep 2019 – 08:47:08 AM

ಗುಜ್ಜಲ್ ಟಾಕೀಸ್ ಹಾಗೂ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಗುಜ್ಜಲ್ ಪುರುಷೋತ್ತಮ್ ಹಾಗೂ ಡಾಲಿ ಧನಂಜಯ ಅವರು ನಿರ್ಮಿಸುತ್ತಿರುವ `ಬಡವ ರಾಸ್ಕಲ್` ಚಿತ್ರದ ಮುಹೂರ್ತ ಇತ್ತೀಚೆಗೆ ಗವಿಪುರದ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ರೇಣುಕಮ್ಮ ಅವರು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ದುನಿಯಾ ವಿಜಯ್ ಚೊಚ್ಚಲ ದೃಶ್ಯವನ್ನು ನಿರ್ದೇಶನ ಮಾಡಿದರು.

ಶಂಕರ್ ಗುರು ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡುತ್ತಿದ್ದಾರೆ. ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಧನಂಜಯ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಮೃತ ಅಯ್ಯಂಗಾರ್. ರಂಗಾಯಣ ರಘು, ನಾಗಭೂಷಣ್, ಪೂರ್ಣಚಂದ್ರ ಮೈಸೂರು, ನಿರಂಜನ್, ಚಂದ್ರು, ಅಲ್ಲು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.



Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed