ವಿಜಯ್ ಭೋಲೇನಾಥ್ ಅರ್ಪಿಸುವ, ರೋಲಿಂಗ್ ಡ್ರೀಮ್ಸ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರವೀಣ್ರಾಜ್ ಹಾಗೂ ವಿ.ವಿ.ಎನ್.ವಿ ಸುರೇಶ್ಕುಮಾರ್ ಅವರು ನಿರ್ಮಿಸಿರುವ ‘ಒಮ್ಮೆ ನಿಶ್ಯಬ್ದ ಒಮ್ಮೆ ಯುದ್ಧ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶ್ರೀನಾಗ್ ಕಥೆ, ಚಿತ್ರಕಥೆ ಬರೆದು ನಿರ್ದೆಶಿಸಿರುವ ಈ ಚಿತ್ರಕ್ಕೆ ಕಿರಣ್ ವಾರಣಾಸಿ ಅವರ ಸಂಗೀತ ನಿರ್ದೇಶನವಿದೆ. ಕಲ್ಯಾಣ್ ಸಮಿ ಅವರ ಛಾಯಾಗ್ರಹಣ, ವಿ.ಸುರೇಶ್ಕುಮಾರ್ ಸಂಕಲನ, ಸ್ನೇಹ ನೃತ್ಯ ನಿರ್ದೇಶನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಸುಮಿತ್ ಪಟೇಲ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರವೀಣ್ ಸೂಡ ಸಂಭಾಷಣೆ ಬರೆದಿದ್ದಾರೆ. ಪ್ರಭು ಮುಂಡಕರ್(ಊರ್ವಿ), ಸಂಯುಕ್ತ ಹೆಗಡೆ(ಕಿರಿಕ್ ಪಾರ್ಟಿ), sಸುಶ್ಮಿತಾ ಗೌಡ, ರಾಮಕೃಷ್ಣ, ಅರವಿಂದ್, ಎಡಕಲ್ಲು ಗುಡ್ದ ಚಂದ್ರಶೇಖರ್, ವಿಜಯ್ ಭೋಲೇನಾಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.