‘ಮುಂದುವರೆದ ಅಧ್ಯಾಯ’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣ
Posted date: 14 Tue, May 2019 – 08:27:01 AM

ಕಣಜ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಆದಿತ್ಯ ಅವರು ನಾಯಕರಾಗಿ ನಟಿಸುತ್ತಿರುವ ‘ಮುಂದುವರೆದ ಅಧ್ಯಾಯ‘ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವೆ ದಿನಗಳ ಚಿತ್ರೀಕರಣ ಬಾಕಿಯಿದೆ. ಬೆಂಗಳೂರು, ದೇವರಾಯನ ದುರ್ಗ, ಮಂಡ್ಯ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.   
ವಿಭಿನ್ನ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಬಾಲು ಚಂದ್ರಶೇಖರ್ ನಿರ್ದೇಶಿಸುತ್ತಿದ್ದಾರೆ. ಜಾನಿ - ನಿತಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ ಬರೆದಿದ್ದಾರೆ.  ದಿಲೀಪ್ ಚಕ್ರವರ್ತಿ  ಛಾಯಾಗ್ರಹಣ,  ಶ್ರೀಕಾಂತ್ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಆದಿತ್ಯ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಮುಖ್ಯಮಂತ್ರಿ ಚಂದ್ರು, ಜೈಜಗದೀಶ್, ಭಾಸ್ಕರ್, ವಿನಯ್ ಕೃಷ್ಣಸ್ವಾಮಿ, ಆಶಿಕಾ ಗೌಡ, ವಿನೋದ್, ಚಿರನ್, ಸಂದೀಪ್, ಚಂದನ ಗೌಡ, ಅಜಯ್ ರಾಜ್, ಶೋಭನ್, ರಾಮರಾವ್, ರಾಜೇಂದ್ರ ಮುಂತಾದವರಿದ್ದಾರೆ.




Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed