ಮಲ್ಲೇಶ್ವರದಲ್ಲಿ ವಿಜಯ ಕರದಂಟು ಐದನೇ ಮಳಿಗೆ- ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮಳಿಗೆಯನ್ನು ಉದ್ಘಾಟಿಸಿದರು
Posted date: 20 Mon, Mar 2023 02:56:17 PM
ಅಮೀನಘಡದ ಜನಪ್ರಿಯ ವಿಜಯ ಕರಗಂಟು ಸಂಸ್ಥೆಯ ಐದನೇ ಮಳಿಗೆ ಇಂದು ಮಲ್ಲೇಶ್ವರದಲ್ಲಿ ಪ್ರಾರಂಭವಾಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಈ ಮಳಿಗೆಯನ್ನು ಉದ್ಘಾಟಿಸಿದ್ದಾರೆ.
 
1907ರಲ್ಲಿ ಅಮೀನಘಡದಲ್ಲಿ ಪ್ರಾರಂಭವಾದ ವಿಜಯ ಕರದಂಟು ಇಂದು ರಾಜ್ಯಾದ್ಯಂತ 18 ಶಾಖೆಗಳನ್ನು ಹೊಂದಿದೆ. ಅಮೀನಘಡದಲ್ಲಿ ಪ್ರಾರಂಭವಾದ ಮಳಿಗೆ ಇಂದು ಬಾದಾಮಿ, ಐಹೊಳೆ, ಬಾಗಲಕೋಟೆ, ರಾಯಚೂರು, ಸಿಂಧನೂರು, ಇಳಕಲ್ಲು, ಹುಬ್ಬಳ್ಳಿ, ಬೆಂಗಳೂರು ಮುಂತಾದ ಊರುಗಳಲ್ಲಿವೆ. ಬೆಂಗಳೂರಿನಲ್ಲೇ ವಿಜಯನಗರ, ಮಲ್ಲೇಶ್ವರ, ಜಯನಗರ, ಡಿ.ವಿ.ಜಿ. ರಸ್ತೆ ಮತ್ತು ಮಲ್ಲೇಶ್ವರದಲ್ಲಿದ್ದು ಮಳಿಗೆಗಳಿದ್ದು, ಈ ಸಂಸ್ಥೆಯನ್ನು ಕುಟುಂಬದ ನಾಲ್ಕನೇ ತಲೆಮಾರಿನವರಾದ ಸಂತೋಷ್​ ಮತ್ತು ಸುನೀಲ್​ ಮುನ್ನಡೆಸುತ್ತಿದ್ದಾರೆ.
 
ಪೌಷ್ಠಿಕ ಸಿಹಿತಿನಿಸು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರದಂಟಿಗೆ ಶುದ್ಧ ತುಪ್ಪ, ಸಾವಯವ ಬೆಲ್ಲ, ಗೋಡಂಬಿ, ಬಾದಾಮಿ, ಅಂಜೂರ, ಒಣಕೊಬ್ಬರಿ, ಗಸಗಸೆ, ಒಣದ್ರಾಕ್ಷಿ ಮುಂತಾದ ಪೌಷ್ಠಿಕ ಪದಾರ್ಥಗಳನ್ನು ಬೆರಸಿ ಮಾಡಲಾಗುತ್ತದೆ. ಹಿಂದೆ ಗರಡಿಮನೆ ಪೈಲ್ವಾನರ ಶಕ್ತಿ-ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರದಂಟನ್ನು ನೀಡಲಾಗುತ್ತಿತ್ತು. ಅಷ್ಟೇ ಅಲ್ಲ, ಗರ್ಭಿಣಿಯರಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಕರದಂಟನ್ನು ಕೊಡಲಾಗಿತ್ತು. ಆದರೆ, ಈಗ ಕರದಂಟು ಆರೋಗ್ಯಕರ ಸಿಹಿತಿನಿಸಾಗಿದ್ದು, ಎಲ್ಲ ವಯಸ್ಸಿನವರೂ ಸವಿಯಬಹುದಾಗಿದೆ. ಇದರಲ್ಲಿ ಸಕ್ಕರೆ ಪ್ರಮಾಣ ಬಹಳ ಕಡಿಮೆ ಇರುವುದರಿಂದ ಮಧುಮೇಹ ಇರುವವರು ಸಹ ಯಾವುದೇ ಭಯವಿಲ್ಲದೆ ಈ ಸಿಹಿತಿನಿಸನ್ನು ತಿನ್ನಬಹುದಾಗಿದೆ.
 
ವಿಜಯ ಕರದಂಟು ಮಳಿಗೆಗಳಲ್ಲಿ ಕರದಂಟು ಅಲ್ಲದೆ ಕಾಜು, ಪೇಡ, ಬಂಗಾಲಿ ಸೇರಿದಂತೆ ಬೇರೆ ಸಿಹಿತಿನಿಸುಗಳು ಸಹ ಲಭ್ಯವಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed